ಮಂಡ್ಯ: ಜಿಲ್ಲೆಯ ಮೈಸೂರು ನಿವಾಸಿಗಳು, ಪುಣ್ಯಕೋಟಿ ಸೇವಾ ಟ್ರಸ್ಟ್ ಮತ್ತು ಮೈಸೂರು ಜಿಲ್ಲೆಯ ನಾಗರೀಕರ ಸಹಯೋಗದೊಂದಿಗೆ ಪರಮಪೂಜ್ಯ ನಾಡೋಜ ಶ್ರೀ ಭಾಷ್ಯಂ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ಶನಿವಾರ ವಿಜಯನಗರದಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಅವರೇ ಕಾಳು ಮುದ್ದೆ ಊಟದ ಕಾರ್ಯಕ್ಕೆ ಯೋಗಾನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಚಾಲನೆ ನೀಡಿದರು.

ಪುಣ್ಯಕೋಟಿ ಸೇವಾ ಟ್ರಸ್ಟ್ ಅಧ್ಯಕ್ಷರೂ ಹಾಗೂ ಆಯೋಜಕರಾದ ಹನುಮಂತೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.