Saturday, June 21, 2025
Google search engine

Homeರಾಜ್ಯಸುದ್ದಿಜಾಲಅಬ್ಬರದ ಮಳೆಗೆ ರೈಲು ಹಳಿ ಮೇಲೆ ಬಂಡೆಕಲ್ಲು ಬಿದ್ದು ಸಂಚಾರದಲ್ಲಿ ವ್ಯತ್ಯಯ: ರೈಲ್ವೇ ಇಲಾಖೆ ಸ್ಪಷ್ಟನೆ

ಅಬ್ಬರದ ಮಳೆಗೆ ರೈಲು ಹಳಿ ಮೇಲೆ ಬಂಡೆಕಲ್ಲು ಬಿದ್ದು ಸಂಚಾರದಲ್ಲಿ ವ್ಯತ್ಯಯ: ರೈಲ್ವೇ ಇಲಾಖೆ ಸ್ಪಷ್ಟನೆ

ಮಂಗಳೂರು (ದಕ್ಷಿಣ ಕನ್ನಡ): ಅಬ್ಬರದ ಮಳೆಗೆ ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವಿನ ಹಾಸನ ಜಿಲ್ಲೆಯ ಯಡಕುಮೇರಿ – ಸಿರಿಬಾಗಿಲು ನಡುವೆ ರೈಲು ಹಳಿಯ ಮೇಲೆ ಬಂಡೆಕಲ್ಲುಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯ ಉಂಟಾಯ್ತು.

ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ ಪ್ರೆಸ್ ಕಡಗರವಳ್ಳಿಗೆ ಶನಿವಾರ ಮುಂಜಾನೆ 3:40ಕ್ಕೆ ಆಗಮಿಸಿದ್ದು, 4 ಗಂಟೆ 10 ನಿಮಿಷ ತಡವಾಗಿ ಸಂಚರಿಸಿದೆ. ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್ಪ್ರೆಸ್ ಸಕಲೇಶಪುರಕ್ಕೆ ಮುಂಜಾವ 3:10ಕ್ಕೆ ಆಗಮಿಸಿದ್ದು 3 ಗಂಟೆ 50 ನಿಮಿಷ ತಡವಾಗಿ ಹೊರಟಿದೆ.

ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು ಸಕಲೇಶಪುರಕ್ಕೆ ಬೆಳಗ್ಗೆ 6:26ಕ್ಕೆ ಆಗಮಿಸಿದ್ದು, ಸುಮಾರು 2 ಗಂಟೆ 48 ನಿಮಿಷ ತಡವಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.ಹಿಟಾಚಿ ಯಂತ್ರಗಳ ಮೂಲಕ ಬಂಡೆಕಲ್ಲುಗಳನ್ನು ತೆರವುಗೊಳಿಸಲಾಗಿದ್ದು, ಹಾನಿಗೊಳಗಾಗಿರುವ ರೈಲು ಹಳಿಗಳ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಈ ಮಧ್ಯೆ ಸಂಚಾರ ಅಡಚಣೆಯ ವೇಳೆ ರೈಲಿನಲ್ಲಿರುವ ಪ್ರಯಾಣಿಕರಿಗೆ ಕುಡಿಯುವ ನೀರು, ಬಿಸ್ಕತ್ತು, ಉಪಹಾರ ಮತ್ತು ಚಹಾ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆಯಲ್ಲಿ ಇಂದು ತಿಳಿಸಿದೆ.

RELATED ARTICLES
- Advertisment -
Google search engine

Most Popular