Saturday, March 28, 2026
Google search engine

Homeಅಪರಾಧಕಾನೂನುರವಿಶಂಕರ್ ಗುರೂಜಿ ವಿರುದ್ಧದ ಎಫ್‌ಐಆರ್ ರದ್ದು ಮಾಡಿದ ಹೈಕೋರ್ಟ್‌

ರವಿಶಂಕರ್ ಗುರೂಜಿ ವಿರುದ್ಧದ ಎಫ್‌ಐಆರ್ ರದ್ದು ಮಾಡಿದ ಹೈಕೋರ್ಟ್‌

ಬೆಂಗಳೂರು : ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ ಗುರೂಜಿಯವರ ವಿರುದ್ಧದ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ರವಿಶಂಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶ ನೀಡಿದೆ. ಆದೇಶದ ವಿವರವಾದ ಪ್ರತಿ ಇನ್ನೂ ಲಭ್ಯವಾಗಿಲ್ಲ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪ ರವಿಶಂಕರ್ ಗುರೂಜಿಯವರ ಆರ್ಟ ಆಫ್ ಲಿವಿಂಗ್ ಸಂಸ್ಥೆಯ ವಿರುದ್ಧ ಕೇಳಿಬಂದಿತ್ತು.

ಅದನ್ನು ರದ್ದುಪಡಿಸಲು ಕೋರಿದ್ದ ರವಿಶಂಕರ್‌ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವುದನ್ನು ಬಿಎಂಟಿಎಫ್‌ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಆಕ್ಷೇಪಿಸಿದ್ದರು.

RELATED ARTICLES
- Advertisment -
Google search engine

Most Popular