ಮಂಗಳೂರು ದಕ್ಷಿಣ ಕನ್ನಡ (ದಕ್ಷಿಣ ಕನ್ನಡ ಜಿಲ್ಲೆ)ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16ರ ಸೋಮವಾರ ರಜೆಯನ್ನು ಘೋಷಿಸಿ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಅವರು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ನಿನ್ನೆ ರಾತ್ರಿ ಆಯ್ದ ತಾಲೂಕಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಆದ್ರೆ ಮಳೆಯ ಅಬ್ಬರ ಜೋರಾಗಿದ್ದರಿಂದ ಎಲ್ಲಾ ತಾಲೂಕಿಗೆ ಇಂದು ರಜೆ ಘೋಷಿಸಲಾಗಿದೆ.