ಮಂಗಳೂರು (ದಕ್ಷಿಣ ಕನ್ನಡ): ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ಉಳ್ಳಾಲದ ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತ ಗೊಂಡಿದೆ.
ಕುಂಪಲ, ಕಲ್ಲಾಪು, ಧರ್ಮ ನಗರ, ಉಚ್ಚಿಲ, ತಲಪಾಡಿ , ವಿದ್ಯಾನಗರ , ಕಲ್ಕಟ್ಟ ಮುಂತಾದ ಕಡೆ ಗಳಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು ಮನೆಯೊಳಗೆ ನೀರು ನುಗ್ಗಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆಗೆ ಸ್ಥಳಾಂತರ ಗೊಂಡಿದೆ.
ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ . ತಲಪಾಡಿ ಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಈ ಕುಟುಂಬ ವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.