Wednesday, June 25, 2025
Google search engine

Homeರಾಜಕೀಯಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ: ಜಮೀರ್ ಅಹಮದ್ ಖಾನ್...

ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ: ಜಮೀರ್ ಅಹಮದ್ ಖಾನ್ ಸ್ಪಷ್ಟನೆ

ಬೆಂಗಳೂರು: ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಜಮೀರ್ ಅಹಮದ್ ಖಾನ್ ಅವರು, “ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿದ್ದೇನೆ ಎಂಬುದು ಸಾಬೀತಾದರೆ, ಯಾರೂ ಕೇಳಬೇಕಾಗಿಲ್ಲ – ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಘೋಷಿಸಿದರು. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ ಎಂದು ಅವರು ತೀವ್ರ ನಿಲುವು ವ್ಯಕ್ತಪಡಿಸಿದರು.

ಹಿರಿಯ ಶಾಸಕರಾದ ಬಿ.ಆರ್. ಪಾಟೀಲ್ ಅವರ ಆರೋಪ ಕುರಿತು ತನಿಖೆಗೆ ಆದೇಶಿಸಲಾಗಿದೆ. “ತಪಾಸಣೆಯ ಬಳಿಕ ತಪ್ಪಿತಸ್ಥರು ಯಾರಾದರೂ ಇದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಾಟೀಲ್ ಅವರ ಜತೆಗೆ ನೇರವಾಗಿ ಮಾತನಾಡುತ್ತೇನೆ,” ಎಂದರು.

ಬಿ.ಆರ್. ಪಾಟೀಲ್ ಅವರು ಸಚಿವರು ಅಥವಾ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂದು ನೇರವಾಗಿ ಆರೋಪಿಸಿಲ್ಲ. ಪಂಚಾಯಿತಿ ಮಟ್ಟದಲ್ಲಿ ಯಾರಾದರೂ ದುರ್ಬಳಕೆ ಮಾಡಿದ್ದರೆ, ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವಿಚಾರವನ್ನು ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತಿಳಿಸಿದಂತೆಯೂ ತಿಳಿಸಿದ್ದಾರೆ. ಮನೆ ಹಂಚಿಕೆಯಲ್ಲಿ ತಮ್ಮ ಪಾತ್ರವಿಲ್ಲ ಎಂದು ಖಾನ್ ಸ್ಪಷ್ಟಪಡಿಸಿದರು. ಫಲಾನುಭವಿ ಆಯ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತದೆ. ಶಾಸಕರ ಶಿಫಾರಸು ಪತ್ರದ ಆಧಾರದ ಮೇಲೆ ಮನೆ ಹಂಚಿಕೆ ಆಗುತ್ತದೆ. “ಆಳಂದ ಕ್ಷೇತ್ರದಲ್ಲೂ ಪಾಟೀಲ್ ಅವರ ಶಿಫಾರಸಿನಿಂದಲೇ 950 ಮನೆಗಳನ್ನು ನೀಡಲಾಗಿದೆ,” ಎಂದೂ ಅವರು ಹೇಳಿದರು.

RELATED ARTICLES
- Advertisment -
Google search engine

Most Popular