Monday, June 23, 2025
Google search engine

Homeರಾಜಕೀಯಇಬ್ರಾಹಿಂ ಪುತ್ರ ಫಯಾಜ್, ಮಾಜಿ ಸಚಿವ ಶಂಕರ್ ಕಾಂಗ್ರೆಸ್‌ಗೆ ಸೇರ್ಪಡೆ

ಇಬ್ರಾಹಿಂ ಪುತ್ರ ಫಯಾಜ್, ಮಾಜಿ ಸಚಿವ ಶಂಕರ್ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಪುತ್ರ ಸಿ.ಎಂ.ಫಯಾಜ್, ಮಾಜಿ ಸಚಿವ ಆರ್.ಶಂಕರ್ ಹಾಗೂ ತುಮಕೂರು ಜೆಡಿಎಸ್ ನಾಯಕ ಗೋವಿಂದರಾಜು ಅವರು ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೂರೂ ಮಂದಿ ನಾಯಕರನ್ನು ಪ್ರತ್ಯೇಕವಾಗಿ ಪಕ್ಷಕ್ಕೆ ಬರ ಮಾಡಿಕೊಂಡರು.

ಮೊದಲಿಗೆ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಕೇವಲ ೩ ಸಾವಿರ ಮತಗಳಿಂದ ಸೋತಿದ್ದ ಗೋವಿಂದರಾಜು ಅವರಿಗೆ ಪಕ್ಷದ ಬಾವುಟ ನೀಡಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರ ಜತೆ ಪ್ರೇಮಾ ಮಹಾಲಿಂಗಪ್ಪ, ಬೋರೇಗೌಡ ಸೇರಿ ಹಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಸಚಿವ ಡಾ.ಜಿ. ಪರಮೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಮುದ್ದ ಹನುಮೇಗೌಡ ಹಾಜರಿದ್ದರು.

ಇದೇ ವೇಳೆ ಮಾಜಿ ಸಚಿವ ಆರ್. ಶಂಕರ್ ಅವರು ಕುಂದಾಪುರ ರತ್ನಾಕರ್, ಷಣ್ಮುಗಪ್ಪ ಕಂಬಳಿ, ಭೀಮಣ್ಣ ಹಳಕಟ್ಟಿ ಸೇರಿದಂತೆ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಇನ್ನು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಪುತ್ರ ಸಿ.ಎಂ. ಫಯಾಜ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

RELATED ARTICLES
- Advertisment -
Google search engine

Most Popular