Thursday, June 12, 2025
Google search engine

Homeಅಪರಾಧಕಾನೂನುಅಕ್ರಮ ಗಣಿಗಾರಿಕೆ ಪ್ರಕರಣ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಅಕ್ರಮ ಗಣಿಗಾರಿಕೆ ಪ್ರಕರಣ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಗಂಗಾವತಿ: ಗಂಗಾವತಿಯ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಆರೋಪಿಗಳಾದ ಅಲಿ ಖಾನ್, ಬಿ.ಬಿ. ಶ್ರೀನಿವಾಸರೆಡ್ಡಿ ಮತ್ತು ರಾಜಗೋಪಾಲರೆಡ್ಡಿಗೂ ಜಾಮೀನು ದೊರಕಿದ್ದು, ಸಿಬಿಐ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ತಡೆಹಿಡಿದಿದೆ.

ಜನಾರ್ಧನ ರೆಡ್ಡಿಗೆ ದೇಶ ತೊರೆಯದಂತೆ ಸೂಚನೆಯಿದ್ದು, ₹10 ಲಕ್ಷ ಬಾಂಡ್ ನೀಡುವಂತೆ ಷರತ್ತು ವಿಧಿಸಲಾಗಿದೆ. ಹೈದರಾಬಾದ್‌ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ಮೇ 6ರಂದು ಶಿಕ್ಷೆ ವಿಧಿಸಿತ್ತು.

RELATED ARTICLES
- Advertisment -
Google search engine

Most Popular