ಬೆಂಗಳೂರು : ಸಿಎಂ ಬದಲಾದರೇ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಇಂದು ದೆಹಲಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.
ನಾನು ದೆಹಲಿಗೆ ಹೋಗುತ್ತಿಲ್ಲ. ಇವತ್ತು ಅಮೆರಿಕಕ್ಕೆ ಹೋಗುತ್ತಿದ್ದೇನೆ. ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸಬೇಕು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ರನ್ನು ಮುಂದುವರೆಸಬೇಕೋ ಸಂಪುಟ ಪುನಾರಚನೆ ಮಾಡಬೇಕೋ ನಿರ್ಧರಿಸಲಿ ಎಂದು ತಿಳಿಸಿದರು.



