Monday, May 11, 2026
Google search engine

Homeರಾಜಕೀಯಕೇರಳ ಸಿಎಂ ಆಯ್ಕೆ ; ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ : ರಮೇಶ್ ಚೆನ್ನಿತ್ತಲ

ಕೇರಳ ಸಿಎಂ ಆಯ್ಕೆ ; ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ : ರಮೇಶ್ ಚೆನ್ನಿತ್ತಲ

ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಹುದ್ದೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ರಾಜ್ಯದ ಎಲ್ಲಾ ಕಾಂಗ್ರೆಸ್ ಹಾಗೂ ಯುಡಿಎಫ್ ಕಾರ್ಯಕರ್ತರು ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಮೇಶ್‌ ಚೆನ್ನಿತ್ತಲ ಹೇಳಿದ್ದಾರೆ.

ನವದೆಹಲಿಯಿಂದ ಮರಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೇಳಬೇಕಾದ ಎಲ್ಲ ವಿಚಾರಗಳನ್ನು ಹೈಕಮಾಂಡ್‌ಗೆ ತಿಳಿಸಿದ್ದೇವೆ. ಅವರು ಎಲ್ಲವನ್ನೂ ಗಮನದಿಂದ ಕೇಳಿದ್ದಾರೆ. ಉಳಿದದ್ದು ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದರು.

ಇನ್ನೂ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ಉಂಟಾಗಿರುವ ವಿಳಂಬವನ್ನು ಪ್ರಜಾಪ್ರಭುತ್ವದ ಭಾಗವೆಂದು ವಿವರಿಸಿದ ಚೆನ್ನಿತ್ತಲ, ಅಂತಿಮ ತೀರ್ಮಾನವನ್ನು ಎಲ್ಲರೂ ಗೌರವಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ಕೇರಳದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಸ್ಪರ್ಧಿಗಳಲ್ಲಿ ಚೆನ್ನಿತ್ತಲ ಕೂಡ ಒಬ್ಬರಾಗಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಬಿಜೆಪಿಯಂತೆ ನಾಗ್ಪುರದ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುವ ಪಕ್ಷವಲ್ಲ ಎಂದು ಅವರು ಟೀಕಿಸಿದ್ದರು.

ಶನಿವಾರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ನವದೆಹಲಿಯಲ್ಲಿ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್‌‍, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌‍, ಚೆನ್ನಿತ್ತಲ, ಕೆಪಿಸಿಸಿ ಮುಖ್ಯಸ್ಥೆ ಸನ್ನಿ ಜೋಸೆಫ್‌ ಮತ್ತು ಕೇರಳದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಾ ದಾಸ್‌‍ ಮುನ್ಸಿ ಅವರೊಂದಿಗೆ ಕೇರಳದ ಮುಂದಿನ ಮುಖ್ಯಮಂತ್ರಿಯಾಗಲಿರುವ ಕಾಂಗ್ರೆಸ್‌‍ ಶಾಸಕಾಂಗ ಪಕ್ಷದ ನಾಯಕಿಯ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಸಭೆಯಲ್ಲಿ ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು ಚರ್ಚೆ ನಡೆಯಿತು. ಸಭೆಯ ಬಳಿಕ ಕೇರಳ ಕಾಂಗ್ರೆಸ್ ನಾಯಕರು ಮತ್ತು ದೀಪಾ ದಾಸ್‌ಮುಂಸಿ ಜಂಟಿಯಾಗಿ ಕಾರ್ಯಕರ್ತರಿಗೆ ಮನವಿ ಮಾಡಿ, ನಾಯಕತ್ವದ ವಿಚಾರದಲ್ಲಿ ಪ್ರತಿಭಟನೆಗಳು ಅಥವಾ ಫ್ಲೆಕ್ಸ್‌ ಬೋರ್ಡ್‌ ಅಭಿಯಾನಗಳಿಂದ ದೂರವಿರಲು ಸೂಚಿಸಿದರು.

RELATED ARTICLES
- Advertisment -
Google search engine

Most Popular