ಕೋಲಾರ: ಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಹಾಗು ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ನಂಗಲಿಯ ಬಾರ್ ಮಾಲೀಕ ಪ್ರಶಾಂತ್ ಬಳಿ ₹50,000 ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಎದುರಾಗಿದ್ದು, ಮೊದಲ ಹಂತವಾಗಿ ₹20,000 ಮೊತ್ತವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಎಸ್ಐ ಅರ್ಜುನ್ ಗೌಡನನ್ನು ಹಿಡಿದಿದ್ದಾರೆ. ಈ ವೇಳೆ ಕಾನ್ಸ್ಟೇಬಲ್ ಸುರೇಶ್ನ ಪಾತ್ರವೂ ಬೆಳಕಿಗೆ ಬಂದಿದೆ.
ಲಂಚದ ಹಣವನ್ನು ಸ್ವೀಕರಿಸಿದ ಪಿಎಸ್ಐ ಅರ್ಜುನ್ ಗೌಡನನ್ನು ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.