ಮಂಡ್ಯ: ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಅಖಾಡ ಗರಿಗೆದರಿದ್ದು, ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ.
2024ರ ಲೋಕಸಭಾ ಚುನಾವಣೆ ಹಿನ್ನಲೆ ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡ್ಯ ಲೋಕಸಭಾ ಉಸ್ತುವಾರಿ ಸುನೀಲ್ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ಚುನಾವಣಾ ಸಿದ್ದತೆಗಾಗಿ
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಮನೆ ಮನೆಗೆ ತೆರಳಿ ಯೋಜನೆಗಳ ತಲುಪಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಮಂಡ್ಯದಲ್ಲಿ ಮತ್ತಷ್ಟು ಬಿಜೆಪಿ ಸಂಘಟನೆ ಮಾಡಲು ಸಭೆಯಲ್ಲಿ ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾ ಉಸ್ತುವಾರಿ ಸುನೀಲ್ ಸುಬ್ರಹ್ಮಣ್ಯ ಸೂಚನೆ ಕೊಟ್ಟಿದ್ದಾರೆ.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಸಿಪಿ ಉಮೇಶ್, ಸಿದ್ದರಾಮಯ್ಯ, ಮುನಿರಾಜು, ಸೇರಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.