ದಾವಣಗೆರೆ: 18ನೇ ಲೋಕಸಭೆ ಚುನಾವಣೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ಸ್ವೀಪ್ ಸಮಿತಿ ಚುನಾವಣೆಯಲ್ಲಿ ಎಲ್ಲ ಮತದಾರರು ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸಿ, ಜಗಳೂರು ತಾಲೂಕಿನ ಗುರುಸಿದ್ದಾಪುರದ ಹಾಲೇಶ್ ಮತ್ತು ಪೃಥಿ ಅವರ ಮದುವೆ ಮನೆಯಲ್ಲಿ ನವದಂಪತಿಗಳು ಹಾಗೂ ಸಂಬಂಧಿಕರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸಲು ಕರೆ ನೀಡಿದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.