ಮಂಡ್ಯ : ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕಾರ್ಯಕ್ರಮ ರೂಪಿಸಬೇಕು ಎಂದು ಕರುನಾಡ ಸೇವಕರು ಸಂಘಟನೆಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಕರೆ ನೀಡಿದರು
ಮಂಡ್ಯ ತಾಲೋಕಿನ ಬಿ ಗೌಡಗೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಚಲುವರಾಯಸ್ವಾಮಿ ಹಿತೈಷಿಗಳ ಬಳಗ ಸಮವಸ್ತ್ರ ನೀಡುವ ಕಾರ್ಯಕ್ರಮವನ್ಮುದ್ದೇಶಿಸಿ ಮಾತನಾಡಿದ ಅವರು ಸಚಿವ ಚಲುವರಾಯಸ್ವಾಮಿ ಜನ್ಮದಿನವನ್ನು ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.ಪ್ರತಿನಿತ್ಯ ರಾಜ್ಯದ ಒಂದಿಲ್ಲೊಂದು ಮೂಲೆಯಲ್ಲಿ ಸರಕಾರಿ ಶಾಲೆಗಳು ಬಾಗಿಲು ಮುಚ್ಚುತ್ತಿವೆ.ಅಗತ್ಯ ಶಿಕ್ಷಕರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸರಕಾರಿ ಕನ್ನಡ ಶಾಲೆಗಳು ಅಸ್ತಿತ್ವದ ಭೀತಿ ಎದುರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ದಿನೇ ದಿನೇ ಖಾಸಗಿಯವರ ಪಾಲಾಗುತ್ತಿದೆ.ಸರಕಾರಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸದಿದ್ದರೆ ಹಣವಿದ್ದವರಿಗೆ ಮಾತ್ರ ಶಿಕ್ಷಣ ಎಂಬ ಪದ್ದತಿ ಜಾರಿಗೆ ಬರಲಿದೆ.

ಸರಕಾರಿ ಶಾಲೆ ಮತ್ತು ಆಸ್ಪತ್ರೆಗಳ ಕಾರಣಕ್ಕೆ ಖಾಸಗಿಯವರು ಶಿಕ್ಷಣದಲ್ಲಿ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ.ಸರಕಾರ ತನ್ನ ಆರನೇ ಗ್ಯಾರಂಟಿಯಾಗಿ ಸರಕಾರಿ ಶಾಲೆ ಮತ್ತು ಆಸ್ಪತ್ರೆಗಳ ಸುಧಾರಣೆಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು.
ಶಾಸಕ ರವಿಕುಮಾರ್ ಮಾತನಾಡಿ ಸರಕಾರಿ ಶಾಲೆಗಳ ಅಭಿವೃದ್ದಿಗೆ ತಮ್ಮ ಸರಕಾರ ಅಗತ್ಯ ಅನುದಾನ ಒದಗಿಸಲಿದೆ ರಾಜ್ಯದಲ್ಲಿ ೫೧ ಸಾವಿರ ಅತಿಥಿ ಶಿಕ್ಷಕರ ನೇಮಕಗೊಳಿಸಿ ಯಾವುದೆ ಸರಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ನೂರಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.ಅತೀ ಹೆಚ್ಚು ಅಂಕ ಪಡೆದಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿಥಿಲಗೊಂಡಿದ್ದ ಎರಡು ಕೊಠಡಿಗಳನ್ನು ಸಂಪೂರ್ಣ ತೆರವುಗೊಳಿಸಿ ನೂತನ ಕೊಠಡಿ ನಿರ್ಮಿಸಿ ಕೊಡುವಂತೆ ಶಾಲೆಯ ಮುಖ್ಯೋಪಾಧ್ಯಯರು ಸಲ್ಲಿಸಿದ ಮನವಿಗೆ ಶಾಸಕರು ಸಮ್ಮತಿ ಸೂಚಿಸಿದರು.
ವೇದಿಕೆಯಲ್ಲಿ ಚಲುವರಾಯಸ್ವಾಮಿ ಹಿತೈಷಿಗಳ ಬಳಗದ ಅಧ್ಯಕ್ಚ ನವೀನ್ ಕುಮಾರ್ ಜಿ ಬಿ.
ಮನ್ ಮೂಲ್ ಅಧ್ಯಕ್ಷ ಉಮ್ಮಡಹಳ್ಳಿ ಶಿವಕುಮಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸವಿತಾ ಸತೀಶ್ ಗ್ರಾಮದ ಮುಖಂಡರಾದ ಜಯರಾಂ.ಎಸ್ ಡಿಎಂಸಿ ಅಧ್ಯಕ್ಷ ಪ್ರಶಾಂತ್ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಮುಖ್ಯ ಶಿಕ್ಷಕ ಲಿಂಗರಾಜು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.