Friday, May 30, 2025
Google search engine

Homeರಾಜ್ಯಕಾವೇರಿ ನದಿಗೆ ಬಿಸ್ಲರಿ ನೀರು ಸುರಿದು ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

ಕಾವೇರಿ ನದಿಗೆ ಬಿಸ್ಲರಿ ನೀರು ಸುರಿದು ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

ಮಂಡ್ಯ: ಸುಪ್ರೀಂಕೋರ್ಟ್ ತೀರ್ಪು ವಿರೋದಿಸಿ ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ಪ್ರತಿಭಟನೆ ಮುಂದುವರೆದಿದೆ.

ಶ್ರೀರಂಗಪಟ್ಟಣದಲ್ಲಿ ವೆಲ್ಲೆಸ್ಲಿ ಸೇತುವೆ ಮೇಲಿಂದ ಕಾವೇರಿ  ನದಿಗೆ ಬಿಸ್ಲರಿ ನೀರು ಸುರಿದು ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ.

ಮರವೇ ಸಂಸ್ಥಾಪಕ ಅಧ್ಯಕ್ಷ. ಶಂಕರ್ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ತಮಿಳುನಾಡಿಗೆ ನೀರು ಬಿಡ್ತಿರೋದಕ್ಕೆ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಪದೇ ಪದೇ ಕಾವೇರಿ ನೀರು ಕೇಳುವ ತಮಿಳುನಾಡು ಸಿ.ಎಂ.ಸ್ಟ್ಯಾಲಿನ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಈಗ ಬಿಸ್ಲಿರಿ ನೀರು ಸುರಿದು ಕೊಡ್ತಿದ್ದೀವಿ. ಮುಂದೆ ನಮ್ಮ ಹೆಣಗಳು ಈ ನದಿಯಲ್ಲಿ ತೇಲಿ ಬರುವುದಾಗಿ ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular