Saturday, January 10, 2026
Google search engine

Homeಅಪರಾಧಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ‌ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ ಕಾರು ಸೇರಿದಂತೆ ಮೂರ್ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದು ನಂತರ ಹಳ್ಳಕ್ಕೆ ಉರುಳಿದೆ.

ಡಿವೈಡರ್ ಹಾರಿದ ಬಸ್ ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಕಾರು, ಬೈಕ್‌ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಬಸ್‌ ನಲ್ಲಿದ್ದ 25 ಮಂದಿ ಪೈಕಿ ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಚಾಲಕನ ಕಾಲು ಮುರಿದಿದ್ದು, ಒಂದು ಕಾರು, 4ಕ್ಕೂ ಹೆಚ್ಚು ಬೈಕ್ ಜಖಂಗೊಂಡಿವೆ. ಬಸ್ ಗುದ್ದಿದ ರಭಸಕ್ಕೆ ಬಸ್ ಜೊತೆ ಹಳ್ಳಕ್ಕೆ ಬೈಕೊಂದು ಸಹ ಬಿದ್ದಿದೆ.

ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಗೆ ರವಾನಿಸಲಾಗಿದೆ.

RELATED ARTICLES
- Advertisment -
Google search engine

Most Popular