Saturday, May 31, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಅಂಗನವಾಡಿಗಳಿಗೆ ರಜೆ, ಹಲವು ಗ್ರಾಮಗಳಲ್ಲಿ ಹಾನಿ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಅಂಗನವಾಡಿಗಳಿಗೆ ರಜೆ, ಹಲವು ಗ್ರಾಮಗಳಲ್ಲಿ ಹಾನಿ

ಮಂಗಳೂರು (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮುಂದಿನ 3 ಗಂಟೆಗಳಲ್ಲಿ ದಕ್ಷಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಒಂದೆರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಬಂಟ್ವಾಳ ತಾಲೂಕಿನಾದ್ಯಂತ ಮಳೆ ಮುಂದುವರಿಕೆ ಕಾಡಬೆಟ್ಟು ಗ್ರಾಮದ ವಗ್ಗ ಎಂಬಲ್ಲಿ ವಾಸ್ತವ್ಯ ಇಲ್ಲದ ಮನೆಯ ತಡೆಗೋಡೆ ಕುಸಿತ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡ ದರ್ಬೆಯಲ್ಲಿ ಶಿಥಿಲಗೊಂಡ ಛಾವಣಿಗೆ ಟಾರ್ಪಲ್ ಅಳವಡಿಸಲು ಕ್ರಮ ಪುದು ಗ್ರಾಮದ ಅಮ್ಮೆಮಾರಲ್ಲಿ ಮನೆ ಗೋಡೆ ಹಾಗೂ ಹಂಚಿಗೆ ಹಾನಿ ಬಡಗಬೆಳ್ಳೂರು ಗ್ರಾಮದ ನಿವಾಸಿ ಮಮತಾರ ಮನೆಯ ಬದಿ ತಡೆಗೋಡೆ ಬಿದ್ದು ಮನೆಗೆ ಹಾನಿ ನೆಟ್ಲಮುಡ್ನೂರು ಗ್ರಾಮದ ಪರ್ಲೊಟ್ಟು ಬಳಿ ಮರ ಬಿದ್ದು ಕಾಲು ಸಂಕ ಕುಸಿತ ಸಜಿಪಮುನ್ನೂರು ಗ್ರಾಮದ ತೀವ್ರ ಮಳೆಯಿಂದ ಸ್ಥಳೀಯ ಚರಂಡಿಯ ನೀರು ಮನೆಯೊಳಗೆ ನುಗ್ಗಿದ್ದು, ಮನೆಮಾಲಿಕರು ತಾತ್ಕಾಲಿಕವಾಗಿ ಸ್ಥಳ ಬಿಟ್ಟಿದ್ದಾರೆ.

ಸ್ಥಳೀಯ ಆಡಳಿತದಿಂದ ನೀರು ಹೊರತೆಗೆದು ಮನೆ ಶುದ್ಧೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ತುರ್ತು ನಿರ್ವಹಣಾ ಇಲಾಖೆ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ವಹಿಸುತ್ತಿದ್ದು, ಸಾರ್ವಜನಿಕರನ್ನು ಎಚ್ಚರಿಕೆಯಿಂದ ಇರಲು, ಅನಗತ್ಯವಾಗಿ ಮನೆಯ ಹೊರಗೆ ಹೋಗದಂತೆ, ನದಿ ಹಾಗೂ ಹರಿವಿನ ಸ್ಥಳಗಳಿಗೆ ದೂರವಿರುವಂತೆ ಸೂಚನೆ ನೀಡಲಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು.

RELATED ARTICLES
- Advertisment -
Google search engine

Most Popular