Saturday, June 14, 2025
Google search engine

Homeರಾಜ್ಯಸುದ್ದಿಜಾಲನಂತೂರು–ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಮಾರ್ಗ ‘ಮರಣಗುಂಡಿ’; ರಸ್ತೆ ದುರಸ್ತಿಗೆ ಸ್ಥಳೀಯರಿಂದ ಆಗ್ರಹ

ನಂತೂರು–ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಮಾರ್ಗ ‘ಮರಣಗುಂಡಿ’; ರಸ್ತೆ ದುರಸ್ತಿಗೆ ಸ್ಥಳೀಯರಿಂದ ಆಗ್ರಹ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದೆ. ಈ ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣ ಆಗುತ್ತಿದೆ. ಕೆಲವೆಡೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗುಂಡಿಗಳು ಸಾವನ್ನು ಆಹ್ವಾನಿಸುತ್ತಿದೆ. ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದೆ ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗುತ್ತಿದ್ದಾರೆ.

‌ಮೊನ್ನೆ ರಾತ್ರಿ ಹೆದ್ದಾರಿ ಪ್ರಾಧಿಕಾರವು ಪಣಂಬೂರು ಬಳಿ ರಸ್ತೆ ಅಪಘಾತದಲ್ಲಿ ಜನತಾಕಾಲನಿ ನಿವಾಸಿ ಅಶ್ರಫ್ ಸಾವಿಗೀಡಾಗಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ಕೃತಕ ಸೃಷ್ಟಿ ಆಗಿರುವ ಗುಂಡಿಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯದಿಂದಾಗಿ ನಡೆದಿರುವ ಅಪಘಾತಗಳಿಗೆ ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಹೆದ್ದಾರಿ ಇಲಾಖೆಯವರ ಬೇಜವಾಬ್ದಾರಿತನದಿಂದ ಅಶ್ರಫ್ ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ ಅವರ ಕುಟುಂಬ ಅನಾಥವಾಗಿದೆ.

ಪದ್ಮರಾಜ್ ಆರ್., ಜೆರಾಲ್ಡ್ ಹೋರಾಟಗಾರರು.

ಕುಟುಂಬಕ್ಕೆ ಆಧಾರವಾಗಿದ್ದ ಅಶ್ರಫ್ ಸಾವಿನಿಂದ ಪತ್ನಿ ಮತ್ತು ನಾಲ್ಕು ಮಕ್ಕಳಿಗೆ ಗರಿಷ್ಠ ಪರಿಹಾರ ನೀಡಬೇಕು ಮತ್ತು ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯದಿಂದ ಸಂಭವಿಸಿದ ಎಲ್ಲಾ ಅಪಘಾತ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


RELATED ARTICLES
- Advertisment -
Google search engine

Most Popular