Sunday, June 15, 2025
Google search engine

Homeರಾಜ್ಯಸುದ್ದಿಜಾಲಶೃಂಗೇರಿ ಬಳಿ ಭಾರೀ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ 169 ಸಂಚಾರ ಸ್ಥಗಿತ

ಶೃಂಗೇರಿ ಬಳಿ ಭಾರೀ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ 169 ಸಂಚಾರ ಸ್ಥಗಿತ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ-ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ.

ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಕೂಡ ಸಂಪೂರ್ಣ ಸ್ಥಗಿತಗೊಂಡಿದೆ.

ಮಳೆಯ ಮಧ್ಯೆಯೇ ಪೊಲೀಸ್ ಹಾಗೂ ಪಂಚಾಯತ್ ಅಧಿಕಾರಿಗಳು, ಸ್ಥಳೀಯರ ಸಹಕಾರದೊಂದಿಗೆ ರಸ್ತೆಗೆ ಉರುಳಿದ ಮಣ್ಣು ತೆರವು ಮಾಡುವ ಕಾರ್ಯ ನಡೆಸುತ್ತಿದ್ದಾರೆ. ಗುಡ್ಡ ಕುಸಿತದಿಂದ ಕಬ್ಬಿಣದ ತಡೆಗೋಡೆಗಳು ಧರೆಗುರುಳಿದ್ದು, ಗಾಳಿಯ ವೇಗದಿಂದ ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.

ನಿನ್ನೆ ರಾತ್ರಿ ಇಡೀ ಸುರಿದ ಮಳೆಯಿಂದ ಶೃಂಗೇರಿಯಲ್ಲಿ ಅನೇಕ ಅವಾಂತರಗಳು ಸಂಭವಿಸುತ್ತಿವೆ. ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಇನ್ನಷ್ಟು ಭೂಮಿ ಕುಸಿಯುವ ಆತಂಕ ಎದುರಾಗಿದ್ದು ವಾಹನ ಚಾಲಕರು ಬದಲಿ ಮಾರ್ಗವನ್ನು ಬಳಸಬೇಕಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಎಡಬಿಡದೆ ಒಂದೇ ಸಮನೆ ಮಳೆ ಸುರಿಯುತ್ತಿದೆ.

ನಿನ್ನೆ ಕೂಡ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ಇಂದು ಶೃಂಗೇರಿಯಲ್ಲಿ ಭೂ ಕುಸಿತ ಉಂಟಾಗಿದೆ. ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ಮಳೆ ನಿರಂತರವಾಗಿದ್ದು ಮತ್ತಷ್ಟು ಅನಾಹುತ ಸಂಭವಿಸುವ ಆತಂಕ ಸ್ಥಳಿಯರನ್ನು ಕಾಡುತ್ತಿದೆ.‌

RELATED ARTICLES
- Advertisment -
Google search engine

Most Popular