ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮಲ್ಲಸಂದ್ರದ ಬಳಿ ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧವಾಗಿ ನೂರಾರು ರೈತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಶಾಸಕ ಸುರೇಶ್ ಗೌಡ ಹಾಗೂ ಮಠಾಧೀಶರು ನೇತೃತ್ವ ವಹಿಸಿ ರಸ್ತೆ ಮಧ್ಯದಲ್ಲಿ ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಹೊಸಕೆರೆಯಲ್ಲಿ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಸಂಕಾಪುರದಲ್ಲಿ ಕಾಮಗಾರಿಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಪೊಲೀಸರು ತಡೆದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. ಬೇರೆ ಜಿಲ್ಲೆಗೆ ನೀರು ಹರಿಸಲು ಬಿಡಬಾರದು ಎಂಬ ಡಿಮಾಂಡ್ ನೊಂದಿಗೆ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.