Sunday, March 1, 2026
Google search engine

Homeರಾಜ್ಯಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ: ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ, ಸಹಾಯವಾಣಿ ಆರಂಭಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ: ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ, ಸಹಾಯವಾಣಿ ಆರಂಭಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ. ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಬಳ್ಳಾರಿ ಮೂಲದ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular