ನವದೆಹಲಿ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೇಲೆ ಪ್ರಧಾನಿ ನರೇಂದ್ರ ಮೋದಿ ದೊಡ್ಡ ಪ್ರಭಾವ ಬೀರಲಾರರು .೨೦೨೩ರ ವಿಧಾನಸಭೆ ಚುನಾವಣೆ ವೇಳೆ ಮೋ ಏ. ೧೫ ಬಾರಿ ಕರ್ನಾಟಕಕ್ಕೆ ಭೇಟಿ ಕೊಟ್ಟರು. ೨೨೪ ಕ್ಷೇ ತ್ರಗಳ ಪೈಕಿ ನಾವು ೧೩೫ ಕ್ಷೇ ತ್ರಗಳಲ್ಲಿ ಗೆಲುವು ಸಾಧಿಸಿ ಸರ್ಕಾರ ರಚಿಸಿದೆವು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾವುದೇ ದೊಡ್ಡ ಪ್ರಭಾವ ಹೊಂದಿಲ್ಲ. ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳ ಪೈಕಿ ೨೦ ಕ್ಷೇ ತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಹೇಳಿದ್ದಾರೆ. ನಮ್ಮ ಪಕ್ಷ ಪಕ್ಕಾ ಹೋವರ್ಕ್ ಮಾಡಿದೆ. ಪ್ರತಿ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೆಲುವಿನ ಸಾಮರ್ಥ್ಯವನ್ನು ೧೦ ಪಾಯಿಂಟ್ಸ್ ಮೂಲಕ ಅಳೆಯುವುದಾದರೆ, ನಮ್ಮ ಪಕ್ಷದ ಅಭ್ಯರ್ಥಿಗಳು ೯ ಪಾಯಿಂಟ್ಸ್ ಪಡೆದರೆ, ಬಿಜೆಪಿ ಅಭ್ಯರ್ಥಿ ಗಳು ೨ ಅಥವಾ ೩ಕ್ಕೆ ನಿಲ್ಲುತ್ತಾರೆ ಎಂದು ಹೇಳಿದರು.