Sunday, June 1, 2025
Google search engine

Homeರಾಜ್ಯಸುದ್ದಿಜಾಲಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, ತಾಯಿ ಆಸ್ಪತ್ರೆಗೆ ದಾಖಲು

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, ತಾಯಿ ಆಸ್ಪತ್ರೆಗೆ ದಾಖಲು

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು ಕೂಡಾ ಮೃತಪಟ್ಟಿದೆ. ಈ ನಡುವೆ ಅಶ್ವಿನಿಯವರನ್ನು ರಕ್ಷಿಸಲಾಗಿದೆ. ಒಂದೂವರೆ ವರ್ಷ ಪ್ರಾಯದ ಮಗು ಆಯುಷ್ ಮೃತಪಟ್ಟಿದೆ. ಕೆಲಹೊತ್ತಿನ ಮೊದಲು ಮೂರು ವರ್ಷದ ಮಗು ಆರ್ಯನ್ ಕೂಡಾ ಮೃತಪಟ್ಟಿತ್ತು.

ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದರು. ಕಾಂತಪ್ಪರ ಮಗ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಸಣ್ಣ ಮಕ್ಕಳು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಪೈಕಿ ಮೂರು ವರ್ಷದ ಮಗು ಆರ್ಯನ್ ನನ್ನು ಮಧ್ಯಾಹ್ನದ ವೇಳೆ ರಕ್ಷಣಾ ತಂಡ ಅವೇಷಗಳಡಿಯಿಂದ ಹೊರ ತೆಗೆದಿತ್ತು. ಆದರೆ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು. ಬಳಿಕ ತಾಯಿ ಹಾಗೂ ಇನ್ನೊಂದು ಮಗು ಆಯುಷ್ ನನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿತ್ತು. ಅಶ್ವಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular