Saturday, January 24, 2026
Google search engine

Homeಸ್ಥಳೀಯಮೈಸೂರು:  ಕಾರ್ಮೊರೆಂಟ್, ಎಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಮೈಸೂರು:  ಕಾರ್ಮೊರೆಂಟ್, ಎಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಮೈಸೂರು:  ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಕಾರ್ಮೊರೆಂಟ್ ಹಾಗೂ ಎಗ್ರೆಟ್ ಜಾತಿಯ ಪಕ್ಷಿಗಳನ್ನು ಕೊಂದಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ರವಿ ಬಂಧಿತ ಆರೋಪಿ.

ಸಿಂದುವಳ್ಳಿ ಗ್ರಾಮದ ಸಮೀಪ ಮರದಲ್ಲಿ ಕಾರ್ಮೊರೆಂಟ್ ಮತ್ತು ಎಗ್ರೆಟ್ ಪಕ್ಷಿಗಳು ಗೂಡು ಕಟ್ಟಿದ್ದವು. ಈ ವೇಳೆ ಅದೇ ಗ್ರಾಮದ ಬಂಧಿತ ಆರೋಪಿ ರವಿ ಗೂಡನ್ನ ಕಿತ್ತು ಹಾಕಿ. 24ಮರಿಗಳನ್ನ ಸಾಯಿಸಿ ,7ಮರಿಗಳಿಗೆ ಗಾಯಗೊಳಿಸಿದ್ದ. ಗಾಯಗೊಂಡಿದ್ದ ಮರಿಗಳಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಅರಣ್ಯಧಿಕಾರಿಗಳು ಪ್ರಕರಣ  ದಾಖಲಿಸಿಕೊಂಡು ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಆರ್ ಎಫ್ ಓ ಸುರೇಂದ್ರ, ಡಿಆರ್ ಎಫ್ ಓ ಮೋಹನ್ ಕುಮಾರ್, ಗಸ್ತುಪಾಲಕ ರಾಜೇಗೌಡ, ಚಾಲಕ ಗಣೇಶ್ ಭಾಗಿಯಾಗಿದ್ದರು. ಈ ಕುರಿತು ನಂಜನಗೂಡು ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular