Thursday, May 22, 2025
Google search engine

Homeಅಪರಾಧಮೈಸೂರು: ವ್ಯಕ್ತಿಯ ಮೇಲೆ ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಮೈಸೂರು: ವ್ಯಕ್ತಿಯ ಮೇಲೆ ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಮೈಸೂರು: ಹಾಡುಹಗಲೇ ಮೈಸೂರಿನ ಹೃದಯ ಭಾಗದಲ್ಲಿ ಮಚ್ಚು ಲಾಂಗು ಝಳುಪಿಸಿದೆ.

ಟೀ ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಗುಂಪೊಂದು ಹಲ್ಲೆ ನಡೆಸಿದೆ.

ದೇವರಾಜ ಮೊಹಲ್ಲಾದ ಬಿಡಾರಾಂ ಕೃಷ್ಣಪ್ಪ ರಸ್ತೆಯ ಅಂಬೇಡ್ಕರ್ ಭವನದ ಬಳಿ ಘಟನೆ ನಡೆದಿದೆ.

ಇನೋವಾ ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯ ತಂಡದಿಂದ ಕೃತ್ಯ ನಡೆದಿದೆ.

ರಾಮ್ ದೇವ್ ಟೀ ಸ್ಟಾಲ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.

ಟೀ ಸ್ಟಾಲ್ ಗೆ ಹೊಂದಿಕೊಂಡಿರುವ ಮನೆಯ ಮುಂಭಾಗದಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನ ದೇವರಾಜ ಠಾಣೆ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸಿನಿಮೀಯ ಮಾದರಿಯಲ್ಲಿ ಹಾಡಹಗಲಿ‌‌ನಲ್ಲೇ ನಡೆದ ಘಟನೆಯಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ.

ಹಲ್ಲೆಗೊಳಗಾಗಿರುವ ವ್ಯಕ್ತಿ ಹಬೀಬ್ ಅಲಿಯಾಸ್ ಸುಕ್ಕಾ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular