ಮೈಸೂರು: ಮೈಸೂರಿನಲ್ಲಿ ಇಂದು ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ತಾಲೂಕಿನ ನಾಗನಹಳ್ಳಿ ಸಮೀಪದ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ (64) ಎಂದು ಗುರುತಿಸಲಾಗಿದೆ.
ಕುಕ್ಕೆ ಸುಬ್ರಮಣ್ಯ ಮಠದ ನಿಕಟವರ್ತಿಯಾಗಿದ್ದ ಪ್ರಸನ್ನ ಅವರು ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುವಾಗ ಈ ಒಂದು ದುರಂತ ಸಂಭವಿಸಿದೆ.
ಘಟನೆಯ ಬಗ್ಗೆ ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಲಾಗಿದೆ.