Wednesday, May 21, 2025
Google search engine

Homeರಾಜ್ಯಕರ್ನಾಟಕ ರಾಜ್ಯ ವೈದ್ಯಧಿಕಾರಿಗಳ ಸಂಘದ ನೂತನ ಕಟ್ಟಡಕ್ಕೆ ಎನ್.ಚಲುವರಾಯಸ್ವಾಮಿ ಗುದ್ದಲಿ ಪೂಜೆ

ಕರ್ನಾಟಕ ರಾಜ್ಯ ವೈದ್ಯಧಿಕಾರಿಗಳ ಸಂಘದ ನೂತನ ಕಟ್ಟಡಕ್ಕೆ ಎನ್.ಚಲುವರಾಯಸ್ವಾಮಿ ಗುದ್ದಲಿ ಪೂಜೆ

ಮಂಡ್ಯ:  ಡಿಹೆಚ್ಓ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕರ್ನಾಟಕ ರಾಜ್ಯ ವೈದ್ಯಧಿಕಾರಿಗಳ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹಲವು ವರ್ಷದ ಬೇಡಿಕೆ ಇತ್ತು, ಇಂದು ತಿರ್ಮಾನ ತೆಗೆದುಕೊಂಡು ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಸಲ್ಲಿಸಿದ್ದೇವೆ. ಸರ್ಕಾರದಿಂದ ಹಲವು ಇಲಾಖೆಯ ಕಟ್ಟಡದ ಕಾಮಗಾರಿ ನಡೆಯುತ್ತಿದೆ ಎಂದರು.

ಭ್ರಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಮನಸೆಳೆದಿದೆ. ಪ್ರಮುಖವಾಗಿ ಮಂಡ್ಯದಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಬೇಕು. ವೈದ್ಯರೆಲ್ಲರು ಸಹ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯ ತಪಾಸಣೆಗಳನ್ನು ಸಹ ಎಲ್ಲಾ ಕಡೆ ಮಾಡಬೇಕು‌. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಹೆಚ್ಓ ಡಾ.ಮೋಹನ್ ಸೇರಿ ಹಲವರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular