ಗುಡಿಬಂಡೆ: ರಾಜ್ಯದಲ್ಲಿ ದಲಿತ ಸಿಎಂ, ಅಧಿಕಾರ ಹಂಚಿಕೆ ಕಾರ್ಯಕ್ರಮಕ್ಕೆ ಸದ್ಯಕ್ಕೆ ಮುಗಿದಿದ್ದು, ಈ ಸಂಬಂಧ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಸದ್ಯಕ್ಕೆ ಈ ವಿಚಾರ ಬೇಡ ಎಂದು ಆಹಾರ ಸಚಿವ ಡಾ.ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ಹೊರವಲಯದ ಅಂಬೇಡ್ಕರ್ ವೃತ್ತದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗೌರಿಬಿದನೂರಿನಲ್ಲಿ ಕರ್ನಾಟಕ ಮಾದಾರ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಗುಡಿಬಂಡೆಗೆ ಬಂದಿದ್ದೇನೆ ಎಂದರು.
ಈ ವೇಳೆ ದಲಿತ ಸಿಎಂ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸದ್ಯ ಆ ವಿಚಾರ ಮುಗಿದಿದೆ. ಈ ಕುರಿತು ಕಾಂಗ್ರೇಸ್ ಹೈ ಕಮಾಂಡ್ ಮುಂದಿನ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ಬಳಿಕ ರೇಷನ್ ಕಾರ್ಡ್ ವಿಚಾರಕ್ಕೆ ಮಾತನಾಡಿ, ಈಗಾಗಲೇ ನಿಯಾಮವಳಿಗಳ ಪ್ರಕಾರ ಸ್ವಂತ ವಾಹನ ಇರುವವರು ಹಾಗೂ ಕೆಲಸ ಮಾಡುತ್ತಿರುವವರು ಸೇರಿದಂತೆ ಹಲವರ ಕಾರ್ಡ್ಗಳು ಎಪಿಎಲ್ ಆಗಿ ಬದಲಾಗಿದೆ. ಒಂದು ವೇಳೆ ಅರ್ಹರಾಗಿದ್ದು ತಮ್ಮ ಕಾರ್ಡ್ ಎಪಿಎಲ್ ಆಗದಿದ್ದರೇ ಅಂತಹವರು ತಹಸೀಲ್ದಾರ್ ರವರಿಗೆ ಕೂಡಲೇ ಅರ್ಜಿ ಸಲ್ಲಿಸಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗುಡಿಬಂಡೆಯ ದಲಿತ ಮುಖಂಡರಾದ ರಮಣಪ್ಪ, ಜೀವಿಕ ನಾರಾಯಣಸ್ವಾಮಿ, ಮುರಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.



