Monday, June 9, 2025
Google search engine

Homeರಾಜಕೀಯನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು.

ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳುವುದಿಲ್ಲ. ನಮಗೆ ಎಷ್ಟು ಮತಗಳು ಬೇಕೋ ಅಷ್ಟು ಬರುತ್ತದೆ. ಜೆಡಿಎಸ್​ ಅಭ್ಯರ್ಥಿಯನ್ನ ಚುನಾವಣೆಗೆ ನಿಲ್ಲಿಸುವ ಅಗತ್ಯವಿರಲಿಲ್ಲ ಆದರೂ ಹಾಕಿದ್ದಾರೆ. ನಮ್ಮ ಅಭ್ಯರ್ಥಿಗೆ ನಿಷ್ಠೆಯಿಂದ ಮತಹಾಕಬೇಕು ಎಂದು ಸೂಚಿಸಿದ್ದೇವೆ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ಅವರು, ಬೇರೆ ಪಕ್ಷಗಳಿಂದ ಮತಗಳು ಬರಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಮತ ಬರಬಹುದು. ಆಸೆ ಆಮಿಷ ಒಡ್ಡುವ ಪ್ರಮೇಯವೇ ಇಲ್ಲ. 134 + 4 ಪಕ್ಷೇತರರ ಬೆಂಬಲ ಇದೆ. ಲತಾ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ನಮಗೆ ವೋಟ್​ ಹಾಕುತ್ತಾರೆ. ಆಸೆ ಆಮಿಷ ಒಡ್ಡುವುದು ಜೆಡಿಎಸ್​ನವರು ನಾವಲ್ಲ. ಜೆಡಿಎಸ್​ನವರಿಗೆ ಆತ್ಮವೇ ಇಲ್ಲ ಸಾಕ್ಷಿ ಎಲ್ಲಿದೆ ಎಂದು ಟೀಕಿಸಿದರು. ನಿಮ್ಮ ಜೊತೆ ಯಾರು ಯಾರ ಸಂಪರ್ಕದಲ್ಲಿದ್ದಾರೆ ಎಂಬ ಪ್ರಶ್ನೆಗೆ, ಎಲ್ಲರೂ ಇದ್ದಾರೆ. ಜನತಾದಳ ಸೆಕ್ಯೂಲರ್​ ಅಂತ ಇಟ್ಟುಕೊಂಡಿದ್ದಾರೆ. ಆದರೆ ಯಾರ ಜೊತೆ ಸೇರಿಕೊಂಡಿದ್ದಾರೆ ಎಂದು ಭರ್ಜರಿಯಾಗೇ ಟಾಂಗ್​ ನೀಡಿದರು.

RELATED ARTICLES
- Advertisment -
Google search engine

Most Popular