Sunday, June 8, 2025
Google search engine

Homeರಾಜ್ಯಸುದ್ದಿಜಾಲಮತದಾನ ಜಾಗೃತಿಗಾಗಿ ಚಿತ್ರಕಲಾ ಸ್ಪರ್ಧೆ

ಮತದಾನ ಜಾಗೃತಿಗಾಗಿ ಚಿತ್ರಕಲಾ ಸ್ಪರ್ಧೆ

ಧಾರವಾಡ : ಮತದಾರರ ಜಾಗೃತಿಗಾಗಿ ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್ ಸಮಿತಿಯು ಇಂದು ಧಾರವಾಡದ ಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ 18 ರಿಂದ 60 ವರ್ಷದೊಳಗಿನ ಮತದಾರರಿಗೆ ಮುಕ್ತ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.

ಸುಮಾರು 400 ಯುವ ಮತದಾರರು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಚಿತ್ರಗಳನ್ನು ಬಿಡಿಸಿದರು. ವಿವಿಧ ಚಿತ್ರಗಳನ್ನು ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಟಿ.ಕೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಸಂದೇಶವನ್ನು ವಿಭಿನ್ನವಾಗಿ ಚಿತ್ರಕಲೆಯ ಮೂಲಕ ಸಾರುವ ಅತ್ಯುತ್ತಮ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಮೇ 7 ರಂದು ಎಲ್ಲರಿಗೂ ತಪ್ಪದೇ ಮತದಾನ ಮಾಡಲು ಮತ್ತು ಸುತ್ತಮುತ್ತಲಿನ ಪ್ರತಿಯೊಬ್ಬರನ್ನು ಪ್ರೋತ್ಸಾಹಿಸಲು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular