Thursday, June 12, 2025
Google search engine

Homeರಾಜ್ಯಸುದ್ದಿಜಾಲಮುಂಗಾರು ಪೂರ್ವ ಸಿದ್ಧತೆ ಸಭೆ: ರೈತರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು - ಶಾಸಕ ಡಿ.ರವಿಶಂಕರ್ ಸೂಚನೆ

ಮುಂಗಾರು ಪೂರ್ವ ಸಿದ್ಧತೆ ಸಭೆ: ರೈತರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು – ಶಾಸಕ ಡಿ.ರವಿಶಂಕರ್ ಸೂಚನೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಮುಂಗಾರು ಆರಂಭಕ್ಕೂ ಮುನ್ನ ಉತ್ತಮ ಮಳೆಯಾಗಿದ್ದು ರೈತರು ಸಕಾಲದಲ್ಲಿ ಬಿತ್ತನೆ ಮಾಡಲು ಅನುಕೂಲವಾಗಿದೆ ಆದ್ದರಿಂದ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಬೇಕಾಗುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ವಿತರಣೆ ಮಾಡಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಕೆ.ಆರ್.ನಗರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆ ಸಂಬoಧ ನಡೆದ ರೈತ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತರು ಹೈಬ್ರಿಡ್ ಭತ್ತ ಬೆಳೆಯಲು ಹೆಚ್ಚು ಆಸಕ್ತಿ ತೋರುತ್ತಿದ್ದು ಆ ಭಿತ್ತನೆ ಬೀಜಗಳನ್ನು ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗೆ ಬೇಕಾಗುವ ಪರಿಕರಗಳಿಗೆ ತೊಂದರೆಯಾಗದoತೆ ಎಚ್ಚರವಹಿಸಬೇಕಾದ್ದದ್ದು ಕೃಷಿ ಇಲಾಖೆ ಅಧಿಕಾರಿಗಳ ಜವಬ್ದಾರಿಯಾಗಿದ್ದು ಈ ವಿಚಾರವನ್ನು ಇಲಾಖಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸರ್ಕಾರದ ನಿಯಮಾನುಸಾರ ಬೀತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಲು ಅಂಗಡಿ ಮಾಲೀಕರುಗಳಿಗೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು. ನಿಯಮ ಮೀರಿ ಹೆಚ್ಚು ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ ಶಾಸಕರು ಎಲ್ಲಾ ಇಲಾಖಾಧಿಕಾರಿಗಳು ರೈತರು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದರೊಂದಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳಬಗ್ಗೆ ಸಮಪರ್ಕವಾದ ಮಾಹಿತಿ ನೀಡಿ ಅವರುಗಳಿಗೆ ಅನುಕೂಲ್ಪಿಸಬೇಕು ಎಂದು ತಾಕೀತು ಮಾಡಿದರು.

ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಸಾಕಷ್ಟು ಉಪಯುಕ್ತವಾದ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ ಅವುಗಳನ್ನು ಸಮಪರ್ಕವಾಗಿ ಪ್ರಚಾರ ಪಡಿಸಿ ಎಲ್ಲಾ ರೈತರಿಗೂ ಅನುಕೂಲ ಮಾಡುವ ಕೆಲಸವನ್ನು ಇಲಾಖಾ ಅಧಿಕಾರಿಗಳು ಮಾಡುತ್ತಿಲ್ಲ ಈ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿವೆ ಹಾಗಾಗಿ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ಕೊಟ್ಟು ತೋಟಗಾರಿಕೆ ಮಾಡುತ್ತಿರುವ ರೈತರನ್ನು ಗುರುತಿಸಿ ಸವಲತ್ತು ತಲುಪಿಸಬೇಕು ಎಂದು ಸೂಚಿಸಿದರು. ಚಾಮರಾಜ ಬಲ ಮತ್ತು ಎಡದಂಡ ನಾಲೆಗಳ ಕೊನೆ ಹಂತದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿಸುವ ಸಲುವಾಗಿ ನಾಲೆಗಳನ್ನು ಆಧುನೀಕರಣ ಮಾಡಲು ಸರ್ಕಾರದಿಂದ ೧೦೮ ಕೋಟಿ ರೂಗಳನ್ನು ಬಿಡುಗಡೆ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಈ ಬಾರಿ ರೈತರು ಬೆಳೆ ಬೆಳೆಯಲು ತೊಂದರೆಯಾಗದ0ತೆ ಆಗಬೇಕಾಗಿರುವ ಕಾಮಗಾರಿಗಳನ್ನು ನೀರಾವರಿ ಇಲಾಖೆಯವರು ತ್ವರಿತವಾಗಿ ಮಾಡಿಸಬೇಕೆಂದ ಶಾಸಕ ಡಿ.ರವಿಶಂಕರ್ ಟ್ರಾಕ್ಟರ್ ಮತ್ತು ಎತ್ತಿನ ಗಾಡಿ ಸಂಚರಿಸಲು ಅನುಕೂಲವಾಗುವಂತೆ ನಾಲಾ ಏರಿಗಳನ್ನು ಸಮತಟ್ಟು ಮಾಡಿಸಬೇಕು ಎಂದು ಹೇಳಿದರು.

ಚೆಸ್ಕಂ ಇಲಾಖೆಯವರು ಸರ್ಕಾರದ ನಿಯಮದಂತೆ ನಿರಂತರ ವಿದ್ಯುತ್ ಹಾಗೂ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ನೀಡುವಲ್ಲಿ ವಿಫಲಗೊಂಡಿದ್ದಾರೆ ಇಲಾಖೆಯ ಇಂಜಿನಿಯರ್‌ಗಳು ಅವರುಗಳಿಗೆ ಬೇಕಾದ ಮಾರ್ಗಕ್ಕೆ ವಿದ್ಯುತ್ ಸೌಲಭ್ಯ ಒದಗಿಸುತ್ತಿದ್ದು ಉಳಿದವರಿಗೆ ತೊಂದರೆ ನೀಡುತ್ತಿದ್ದಾರೆ ಇದರಿಂದ ರೈತರು ಮನನೊಂದು ನನಗೆ ಸಾಕಷ್ಟು ಬಾರಿ ದೂರು ನೀಡಿದ್ದಾರೆ ಇದು ಪುನರಾವರ್ತಿವಾದರೆ ಸಂಬoಧ ಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಹೆಚ್.ಪಿ.ಪ್ರಶಾಂತ್, ಎಲ್.ಪಿ.ರವಿಶಂಕರ್, ಶ್ರೀನಿವಾಸ್, ಹೆಚ್.ಹೆಚ್.ನಾಗೇಂದ್ರ, ರಾಮಪ್ರಸಾದ್, ಎಂ.ಜೆ.ಕುಮಾರ್, ಅಂಕನಹಳ್ಳಿತಿಮ್ಮಪ್ಪ, ಹರೀಶ್, ನಟರಾಜು, ನೇತ್ರಾವತಿ, ರವೀಂದ್ರ, ಎಂ.ಎನ್.ನಾಗೇಶ್, ಶಿವರಾಮು, ಮಲ್ಲೇಶ್ ಸೇರಿದಂತೆ ಹಲವು ಮುಖಂಡರು ಮಾತನಾಡಿ ರೈತರಿಗೆ ಆಗಬೇಕಾಗಿರುವ ಅನುಕೂಲಗಳ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು.

ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಎಸ್.ನರಗುಂದ್, ತಾ.ಪಂ. ಇಒ ಕುಲದೀಪ್, ಕೃಷಿ ಇಲಾಖೆಯ ಸಹಕಾರ ನಿರ್ದೇಶಕ ಕೆ.ಜೆ.ಮಲ್ಲಿಕಾರ್ಜುನ್, ತೋಟಗಾರಿಕೆ ಇಲಾಖೆಯ ಭಾರತಿ, ಚೆಸ್ಕಂ ಎಇಇ ಅರ್ಕೇಶ್‌ಮೂರ್ತಿ, ಜಿ.ಪಂ. ಮಾಜಿ ಸದಸ್ಯರಾದ ಮಾರ್ಚಳಹಳ್ಳಿಶಿವರಾಮು, ಜಯರಾಮೇಗೌಡ, ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ಶಂಕರ್‌ಸ್ವಾಮಿ, ಮಾಜಿ ಅಧ್ಯಕ್ಷ ನರಸಿಂಹರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್ ಇದ್ದರು.

RELATED ARTICLES
- Advertisment -
Google search engine

Most Popular