Friday, July 11, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ: ಶಾಸಕರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸಲು ಸಭೆ ಘೋಷಣೆ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ: ಶಾಸಕರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸಲು ಸಭೆ ಘೋಷಣೆ

ಮಂಗಳೂರು (ದಕ್ಷಿಣ ಕನ್ನಡ): ಎಸ್.ಕೆ ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಂಗಳೂರು ನೇತೃತ್ವದಲ್ಲಿ‌ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿದರು.

ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ್ ರವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ ಕೂಡಲೇ ಸಭೆ ಕರೆಯಿರಿ ಎಂದು ಮನವಿ ಮಾಡಿದರು.

ಶಾಸಕರ ಸಲಹೆಯ ಮೇರೆಗೆ ಕಾರ್ಯದರ್ಶಿಗಳು ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು ಇಲ್ಲಿನ ಪ್ರಮುಖರೊಂದಿಗೆ ಶುಕ್ರವಾರ ಮಧ್ಯಾಹ್ನವೇ ಸಭೆ ನಡೆಸುತ್ತೇವೆಂದು ತಿಳಿಸಿದರು.

ಶಾಸಕರು ಅದನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿ, ಪ್ರತಿಭಟನೆ ನಿಮ್ಮ ಸಂವಿಧಾನಬದ್ಧ ಹಕ್ಕು, ಅದಕ್ಕೆ ಅಭ್ಯಂತರವಿಲ್ಲ. ಆದರೆ ನಗರದಲ್ಲಿ ಕಸ ವಿಲೇವಾರಿ ಸೇರಿದಂತೆ ಅನೇಕ ಕೆಲಸಗಳು ಸ್ಥಗಿತಗೊಂಡ ಪರಿಣಾಮ ಸಮಸ್ಯೆಯಾಗಿದೆ. ಮಂಗಳೂರಿನ ಜನತೆಗೆ ನಿಮ್ಮ ಸೇವೆ ಅತ್ಯಂತ ಅಗತ್ಯವಾಗಿದ್ದು ಯಾರಿಗೂ ತೊಂದರೆಯಾಗದಂತೆ ದಯವಿಟ್ಟು ಸಹಕರಿಸಿ. ನಿಮ್ಮ ಎಲ್ಲಾ ಕಷ್ಟಗಳನ್ನು ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ. ಗ್ಯಾರಂಟಿಯಿಂದಾಗಿ ಈಗಾಗಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ಸ್ವತಃ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಹಾಗಿರುವಾಗ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೂ ನಾನಂತೂ ನಿಮ್ಮ ಪರವಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular