ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಗೆ ಸಂಬಂಧಿಸಿದಂತೆ ಜಗ್ಗೇಶ್ ಆಡಲಾದ ಮಾತಿಗೆ ಕ್ಷಮೆ ಕೇಳಬೇಕು ಎಂದು ವರ್ತೂರು ಸಂತೋಷ್ ಪರ ಆಪ್ತರು ಆಗ್ರಹಿಸಿದ್ದಾರೆ. ಜಗ್ಗೇಶ್ ಕ್ಷಮೆ ಕೇಳದೇ ಇದ್ದರೆ, ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಆಪ್ತರು ವಿಡಿಯೋ ಹರಿಬಿಟ್ಟಿದ್ದಾರೆ. ಅಲ್ಲಿಗೆ ಹುಲಿ ಉಗುರು ಮತ್ತೊಂದು ಬಾರಿ ಸದ್ದು ಮಾಡುತ್ತಿದೆ.
ರಿಯಲ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ವರ್ತೂರು ಸಂತೋಷ್ಗೆ ಜಗ್ಗೇಶ್ ಕಿತ್ತೋದ್ ನನ್ಮಗ ಎಂದು ಅಸಮಾಧಾನ ಹೊರಹಾಕಿದ್ದರು. ಈ ವಿಚಾರ ಬಿಗ್ ಬಾಸ್ ಕನ್ನಡ ೧೦ರ ಸ್ಪರ್ಧಿ ವರ್ತೂರು ಸಂತೋಷ್ ಗಮನಕ್ಕೂಬಂದಿದೆ. ಜಗ್ಗೇಶ್ ಮಾತಿಗೆ ಅವರು ಪ್ರತಿಕ್ರಿಯೆ ಕೂಡ ನೀಡಿದ್ದಾರೆ.