ಮಂಗಳೂರು (ದಕ್ಷಿಣ ಕನ್ನಡ): ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಕೊಳತ್ತಮಜಲು ಅವರ ಮನೆಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಭೇಟಿ ನೀಡಿದರು.
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಖಾಝಿ, ಮಗ್ಫಿರತ್ ಗಾಗಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿ ಶೀಘ್ರ ಗುಣಮುಖರಾಗಲಿ ಎಂದು ದುಆ ಮಾಡಿದರು. ಈ ಸಂದರ್ಭದಲ್ಲಿ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಹಾಜಿ ಎಂ.ಎಚ್.ಮೊಯ್ದಿನಬ್ಬ, ಪ್ರಧಾನ ಕಾರ್ಯದರ್ಶಿ ರಫೀಕ್ ಕೊಡಾಜೆ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ದಾರುನ್ನೂರ್ ಎಜುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಸಮದ್ ಹಾಜಿ, ಜೊತೆ ಕಾರ್ಯದರ್ಶಿ ಅದ್ದು ಹಾಜಿ ಹಾಗೂ ಇನ್ನಿತರ ಗಣ್ಯ ಮುಖಂಡರು ಉಪಸ್ಥಿತರಿದ್ದರು.

ಇನ್ನು ಇತ್ತೀಚೆಗೆ ಹತ್ಯೆಯಾದ ಅಬ್ದುಲ್ ರಹ್ಮಾನ್ ಕೊಳತ್ತಮಜಲು ಅವರ ನಿವಾಸಕ್ಕೆ ಸಿಪಿಎಂ ಜಿಲ್ಲಾ ಸಮಿತಿ ನಿಯೋಗ ಶುಕ್ರವಾರ ಭೇಟಿ ನೀಡಿತು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಯೋಗವು ನ್ಯಾಯಕ್ಕಾಗಿ ನಡೆಸುವ ಹೋರಾಟದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು.

ನಿಯೋಗದಲ್ಲಿ ಸಿಪಿಎಂ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಯಾದವ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್, ಬಿ.ಎಂ.ಭಟ್, ವಸಂತ ಆಚಾರಿ, ಸದಾಶಿವ ಕುಪ್ಪೆಪದವು, ಯೋಗೀಶ್ ಜೆಪ್ಪಿನಮೊಗರು, ಈಶ್ವರಿ ಬೆಳ್ತಂಗಡಿ, ಸಂತೋಷ್ ಬಜಾಲ್, ರಫೀಕ್ ಹರೇಕಳ, ರಝಾಕ್ ಮೊಂಟೆಪದವು, ರಝಾಕ್ ಮುಡಿಪು, ರಿಝ್ವಾನ್ ಹರೇಕಳ, ಬಾವಾ ಪದರಂಗಿ ಉಪಸ್ಥಿತರಿದ್ದರು.