ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂದಿಯವರು ದೇಶದ ಭವಿಷ್ಯದ ನಾಯಕರಾಗಿದ್ದು ಅವರ ಜನಪರ ಮತ್ತು ಬಡವರ ಪರವಾದ ಚಿಂತನೆಗಳು ಇತರ ರಾಜಕಾರಣಿಗಳಿಗೆ ಮಾದರಿ ಎಂದು ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್ ಹೇಳಿದರು.
ತಾಲೂಕಿನ ಬ್ಯಾಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಾಹುಲ್ ಗಾಂದಿಯವರ 55ನೇ ಜನ್ಮ ದಿನದ ಅಂಗವಾಗಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ. ನಡೆದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಸಂವಿಧಾನದ ರಕ್ಷಣೆಗೆ ಸದಾ ಬದ್ದರಾಗಿ ಕೆಲಸ ನಿರ್ವಹಣೆ ಮಾಡುತ್ತಿರುವ ಅವರು ಮುಂದಿನ ದಿನಗಳಲ್ಲಿ ಪ್ರಧಾನ ಮಂತ್ರಿಗಳಾಗಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ ಅವರು ಅಂತಹ ಜಾತ್ಯಾತೀತ ವ್ಯಕ್ತಿಗಳ ಅವಶ್ಯಕತೆ ನಮ್ಮೆಲ್ಲರಿಗೂ ಇದೆ ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥ ಹಾಗೂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವ ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂದಿಯವರಿಗೆ ಸಾಂವಿದಾನಿಕವಾದ ಎಲ್ಲಾ ಉನ್ನತ ಹುದ್ದೆಗಳು ದೊರೆಯಲಿ ಎಂದು ಪ್ರಾರ್ಥಿಸಿದರು.
ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಮಾತನಾಡಿ ರಾಹುಲ್ ಗಾಂದಿಯವರಿಗೆ ಜನ್ಮ ದಿನದ ಶುಭಾಶಯ ಕೋರಿದರಲ್ಲದೆ ಶಾಲಾ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಬ್ಯಾಡರಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಈರಮ್ಮಸಣ್ಣಯ್ಯ, ಸದಸ್ಯ ರಾಮಚಂದ್ರ, ಗ್ಯಾರಂಟಿ ಸಮಿತಿಯ ಸದಸ್ಯರಾದ ಮೋಹನ್, ಜಯಮ್ಮ, ಲತಾ, ಕುಮಾರ್, ಗ್ರಾಮದ ಮುಖಂಡ ಸಣ್ಣಯ್ಯ, ಮುಖ್ಯ ಶಿಕ್ಷಕ ಸಿದ್ದಯ್ಯ, ಶಿಕ್ಷಕರಾದ ಕುಮಾರ್, ಮಂಜುನಾಥ್, ಕೆಂಪರಾಜು ಮತ್ತಿತರರು ಇದ್ದರು.