ಮಂಗಳೂರು (ದಕ್ಷಿಣ ಕನ್ನಡ): ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ನಲ್ಲಿ ಹೆದ್ದಾರಿ ನದಿಯಂತಾಗಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಆದಿತ್ಯವಾರ ನಡೆದಿದೆ.
ಸೂರಿಕುಮೇರು ಎಂಬಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು.
ಕೆ.ಎನ್.ಆರ್.ಸಿ.ಕಂಪೆನಿಯಯವರ ನಿರ್ಲಕ್ಷ್ಯ ತನದ ಕಾಮಗಾರಿಯಿಂದ ರಸ್ತೆ ಸಹಿತ ಮನೆಗಳಿಗೆ ಮಳೆ ನೀರು ನುಗ್ಗುವಂತಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.