ಮೈಸೂರು : ಕಳೆದ 17 ವರ್ಷಗಳಿಂದ ವನವಾಸ ಅನುಭವಿಸಿ ಕೊನೆಗೂ 18ನೇ ಬಾರಿಗೆ ಚೊಚ್ಚಲ ಐಪಿಎಲ್ ಟ್ರೊಫಿಯನ್ನು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎತ್ತಿ ಹಿಡಿದಿದೆ. ಕೋಟ್ಯಾನುಕೋಟಿ ಅಭಿಮಾನಿಗಳ ಕನಸು ಇದೀಗ ಇಂದು ನನಸಾಗಿದೆ.
ಮೊಟ್ಟಮೊದಲ ಬಾರಿಗೆ ಆರ್ಸಿಬಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ಇಂದು, ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಹೋಳಿಗೆ ಊಟ ನೀಡಲಾಗುತ್ತಿದೆ. ಹೌದು ನಿನ್ನೆ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಇಂದು ಹೋಳಿಗೆ ಊಟ ನೀಡಲಾಗುತ್ತಿದೆ.