Tuesday, January 13, 2026
Google search engine

Homeರಾಜಕೀಯಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದಿರುವುದು ಜಾಗತಿಕ ಮಟ್ಟದಲ್ಲಿ ಅವಮಾನ : ಹೆಚ್.ಸಿ.ಮಹದೇವಪ್ಪ

ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದಿರುವುದು ಜಾಗತಿಕ ಮಟ್ಟದಲ್ಲಿ ಅವಮಾನ : ಹೆಚ್.ಸಿ.ಮಹದೇವಪ್ಪ

ಮೈಸೂರು: MGNREGA ಯೋಜನೆಯನ್ನು ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗಾಗಿ ವಿಕಸಿತ ಭಾರತ ಗ್ಯಾರಂಟಿ ಅಥವಾ ವಿಬಿ-ಜಿ ರಾಮ್ ಜಿ ಕಾಯ್ದೆಯೊಂದಿಗೆ ಬದಲಾಯಿಸುವುದನ್ನು ವಿರೋಧಿಸಿ, ಗ್ರಾಮ ಪಂಚಾಯತ್ ಮಟ್ಟದವರೆಗೆ ಜಿಲ್ಲೆ ತಾಲೂಕು ಮತ್ತು ಹೋಬಳಿ ಎಲ್ಲಾ ಹಂತಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿರುವುದು ರಾಷ್ಟ್ರಕ್ಕೆ ಜಾಗತಿಕ ಮಟ್ಟದಲ್ಲಿ ಅವಮಾನವಾಗಿದೆ ಎಂದಿದ್ದಾರೆ.

ಮುಂದುವರೆದು ಗಾಂಧೀಜಿಯವರು ಜಗತ್ತಿನಾದ್ಯಂತ ಪೂಜಿಸಲ್ಪಡುತ್ತಾರೆ. ಅಲ್ಲದೆ ಬ್ರಿಟಿಷರಿಂದ ಮೆಚ್ಚುಗೆ ಹೊಗಳಿಕೆ ಪಡೆದಿದ್ದರು. ಭಾರತದ ಕೊನೆಯ ಬ್ರಿಟಿಷ್ ಗವರ್ನರ್ ಜನರಲ್ ಲಾರ್ಡ್ ಮೌಂಟ್ ಬ್ಯಾಟನ್ ಒಮ್ಮೆ ತಮಗೆ ಒಬ್ಬನೇ ದೇವರು, ಅದು ಯೇಸು ಎಂದು ಹೇಳಿದ್ದರು. ಆದರೆ, ಗಾಂಧೀಜಿಯನ್ನು ನೋಡಿದ ನಂತರ, ಎರಡನೇ ದೇವರು ಎಂದಿದ್ದರು. ಬಿಜೆಪಿಯವರು ಗಾಂಧೀಜಿಯನ್ನು ಕೊಂದರು. ಈಗ, ಅವರನ್ನು ಇತಿಹಾಸದಿಂದ ಅಳಿಸಲು ಬಯಸುತ್ತಾರೆ. 2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ರಚಿಸಿದ ನಂತರ ಹಲವಾರು ಹೆಸರುಗಳನ್ನು ಬದಲಾಯಿಸಿದೆ. ಆದರೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ ಎಂದರು.

ಈ ಬದಲಾವಣೆಯ ಪರಿಣಾಮಗಳು ರಾಜಕೀಯ, ಆರ್ಥಿಕ ಮತ್ತು ಸಾಂವಿಧಾನಿಕ. ಇದು ಭಾರತದಲ್ಲಿ ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಸಮಾಲೋಚನೆ ಮಾಡಿಲ್ಲ. ಈಗಾಗಲೇ ಕರ್ನಾಟಕವು ಕೇಂದ್ರದಿಂದ ತನ್ನ ಪಾಲನ್ನು ಪಡೆಯುತ್ತಿಲ್ಲ. ಈಗ, ವಿಬಿ-ಜಿ ರಾಮ್ ಜಿ ಕಾಯ್ದೆಯು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರಕ್ಕೆ ಲಾಭವಾಗುವಂತೆ ಹಣಕಾಸಿನ ಅನುಪಾತವನ್ನು 90:10 ರಿಂದ 60:40 ಕ್ಕೆ ಬದಲಾಯಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಉದ್ಯೋಗಾವಕಾಶಗಳಿಲ್ಲದೆ ಜೀವನಕ್ಕಾಗಿ ಎಂಜಿಎನ್‌ಆರ್‌ಇಜಿಎ ಯೋಜನೆಯನ್ನು ಅವಲಂಬಿಸಿರುವವರಾದ 19 ಕೋಟಿ ಬಡ ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular