ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದೆ. ಆದರೆ ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಚುನಾವಣಾ ಕಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಕೆ.ಆರ್.ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಸ್.ಸಿದ್ದೇಗೌಡ ತಿಳಿಸಿದ್ದಾರೆ.

ಜೂನ್. ೨೬ ರಂದು ನಡೆಯಲಿರುವ ಎಂಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಆಯ್ಕೆ ಬಯಸಿ ಸ್ಪರ್ದಿಸಿದ್ದೆ ಆದರೆ ಪಕ್ಷದ ಸೂಚನೆಯಂತೆ ತಮ್ಮ ಚುನಾವಣಾ ಕಣದಿಂದ ನಿವೃತ್ತಿಯಾಗುವುದಾಗಿ ಹೇಳಿದರು. ಈ ಕ್ಷೇತ್ರದಿಂದ ಸ್ಪರ್ದಿಸಿರುವ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರೂ, ಹಿರಿಯರೂ ಆದ ದೊಡ್ಡಸ್ವಾಮೇಗೌಡ ಅವರನ್ನು ಬೆಂಬಲಿಸುವ ಸಲುವಾಗಿ ನಾನು ಚುನಾವಣಾ ಅಖಡದಿಂದ ದೂರ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.
ಜಿಲ್ಲಾ ಬ್ಯಾಂಕಿನ ಅಭಿವೃದ್ದಿ ದೃಷ್ಠಿಯಿಂದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಗಳು ಒಟ್ಟಾಗಿ ಕ್ಷೇತ್ರದಿಂದ ಸ್ಪರ್ದಿಸಿರುವ ದೊಡ್ಡಸ್ವಾಮೇಗೌಡವರನ್ನು ಬೆಂಬಲಿಸುವಂತೆ ಈ ಚುನಾವಣೆಯಲ್ಲಿ ಮತದಾನ ಹಕ್ಕು ಹೊಂದಿರುವ ಮತದಾರನ್ನು ಕೋರಿದರು.
ನಮ್ಮ ಬೆಂಬಲದೊಂದಿಗೆ ಜಿಲ್ಲಾ ಸಹಕಾರ ಬ್ಯಾಂಕಿನ ಚುನಾವಣೆಯಲ್ಲಿ ನಿರ್ದೇಶಕರಾಗಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಅವರು ಗೆಲುವು ಸಾಧಿಸುವುದು ನಿಶ್ಚಿತ ಎಂದಿದ್ದಾರೆ.
ನನ್ನೊಂದಿಗೆ ಕೆ..ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಗಳಾದ ಕೆಡಗನಟರಾಜು, ಹೆಚ್.ಪಿ.ಪ್ರಶಾಂತ್, ಹೆಚ್.ಹೆಚ್.ನಾಗೇಂದ್ರ, ನವೀನ್, ವಿಠಲ, ಡಿಪುನೀತ್ ಧರ್ಮಪಾಲ್, ಶಂಕರ್ನಾಯಕ್, ಕಾಮಾಕ್ಷಮ್ಮ, ಮಂಜುನಾಥ್, ಚಿಕ್ಕಿರೇಗೌಡ, ಗಣೇಶ್ ಮತ್ತು ಹರೀಶ್ ಅವರುಗಳು ದೊಡ್ಡಸ್ವಾಮೇಗೌಡರಿಗೆ ಬೆಂಬಲ ಸೂಚಿಸಿದ್ದೇವೆ ಎಂದಿದ್ದಾರೆ.