Wednesday, July 16, 2025
Google search engine

Homeಸ್ಥಳೀಯಜುಲೈ 19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ; ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಜುಲೈ 19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ; ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು: ಜುಲೈ 19 ರಂದು ಮೈಸೂರಿನಲ್ಲಿ ಭರವತ್ತಾದ ಕಾಂಗ್ರೆಸ್ ಸಾಧನ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜುಲೈ 16ರಂದು ಮೈಸೂರು ಮಹಾರಾಜ ಕಾಲೇಜು ಮೈದಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಭೇಟಿ ನೀಡಿ ವೇದಿಕೆ ಸ್ಥಳ ಪರಿಶೀಲನೆ ನಡೆಸಿದರು. ಈ ಕಾರ್ಯಕ್ರಮ ಸರ್ಕಾರದ ಎರಡು ವರ್ಷದ ಸಾಧನೆ, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ನಿಟ್ಟಿನಲ್ಲಿ ಪ್ರಮುಖವಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರಿನಲ್ಲಿ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಲವಾರು ರಾಜ್ಯ ನಾಯಕರೂ ಭಾಗವಹಿಸಲಿದ್ದಾರೆ. ಸಮಾವೇಶದ ವೇದಿಕೆ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದ್ದು, ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಜಿಲ್ಲಾಡಳಿತದಿಂದ ಭದ್ರತೆ, ಸಾರಿಗೆ, ಆರೋಗ್ಯದಂತಹ ಮೂಲ ಸೌಕರ್ಯಗಳ ವ್ಯವಸ್ಥೆ ನಡೆಸಲಾಗುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, “ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಗೆ ಮೂರು ದಿನಗಳ ಪ್ರವಾಸ ಬರುತ್ತಿದ್ದಾರೆ. ಈ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ,” ಎಂದರು. ಪಿಡಬ್ಲ್ಯೂಡಿ ಇಲಾಖೆಗೆ 502 ಕೋಟಿ, ಜಲಸಂಪನ್ಮೂಲ ಇಲಾಖೆಗೆ 419 ಕೋಟಿ, ಸೆಸ್ಕ್‌ಗೆ 408 ಕೋಟಿ, ಸಣ್ಣ ಕೈಗಾರಿಕೆಗಳಿಗೆ 198 ಕೋಟಿ ಸೇರಿದಂತೆ ಒಟ್ಟಿಗೆ 2569 ಕೋಟಿ ರೂಪಾಯಿ ಅನುದಾನವನ್ನು ಮೈಸೂರು ಜಿಲ್ಲೆಗೆ ನೀಡಲಾಗಿದೆ ಎಂದು ಅವರು ವಿವರಿಸಿದರು.

ಸಿಗಂದೂರು ಸೇತುವೆ ಉದ್ಘಾಟನೆ ವಿಚಾರದಲ್ಲಿ ಮಾತನಾಡಿದ ಅವರು, “ಈ ಸೇತುವೆ ನಮ್ಮ ಆಡಳಿತಕಾಲದ ಯೋಜನೆಯಾಗಿದೆ. ಶಿಷ್ಟಾಚಾರ ಪಾಲಿಸದೆ ಬಿಜೆಪಿಯವರು ಒತ್ತಡದಡಿ ಉದ್ಘಾಟನೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಸರಿಯಾದ ಬೆಳವಣಿಗೆ ಅಲ್ಲ,” ಎಂದು ತೀವ್ರ ಟೀಕೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮಹದೇವಪ್ಪ, “ಇದು ಶಕ್ತಿ ಪ್ರದರ್ಶನ ಅಲ್ಲ. ರಾಜ್ಯದ ಜನರು ಈಗಾಗಲೇ ಆಶೀರ್ವಾದ ನೀಡಿ ಶಕ್ತಿ ನೀಡಿದ್ದಾರೆ,” ಎಂದು ಸ್ಪಷ್ಟಪಡಿಸಿದರು. ಸುರ್ಜೆವಾಲಾ ಸೂಪರ್ ಸಿಎಂ ಎಂಬ ನಿಖಿಲ್ ಕುಮಾರಸ್ವಾಮಿಯ ಹೇಳಿಕೆಗೆ ಅವರು, “ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರೇ ಸಿಎಂ. ಬೇರೆ ಯಾರೂ ಅಲ್ಲ,” ಎಂದು ತಿರುಗೇಟು ನೀಡಿದರು.

ಈ ಸಮಾವೇಶ, ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಹೈಲೈಟ್ ಮಾಡುವ ಜೊತೆಗೆ ಮುಂದಿನ ರಾಜಕೀಯದ ಚಟುವಟಿಕೆಗಳಿಗೆ ದಿಕ್ಕು ತೋರಿಸುವುದಾಗಿ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular