Tuesday, June 17, 2025
Google search engine

Homeರಾಜ್ಯಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ

ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ

ಹುಬ್ಬಳ್ಳಿ: ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಂತೋಷ್ ಲಾಡ್ ಫೌಂಡೇಷನ್ ನಿಂದ ರೂ. ೨ ಲಕ್ಷ ಚೆಕ್ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳೆದ ಮಗಳನ್ನು ಕಳೆದುಕೊಂಡ ಅವರ ನೋವು ಕಂಡು ನಿಜಕ್ಕೂ ಬೇಸರವಾಯಿತು. ಅಂಜಲಿ ಕುಟುಂಬಕ್ಕೆ ವೈಯುಕ್ತಿಕವಾಗಿ ೨ ಲಕ್ಷ ರೂಪಾಯಿಗಳ ಸಹಾಯ ಮಾಡಿದ್ದೇನೆ. ಅಂಜಲಿ ಸಾವಿಗೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದರು. ಭೀಕರವಾಗಿ ಹತ್ಯೆಯಾದ ಅಮಾಯಕ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಲಾಯಿತು. ಬೆಳೆದ ಮಗಳನ್ನು ಕಳೆದುಕೊಂಡ ಅವರ ನೋವು ಕಂಡು ನಿಜಕ್ಕೂ ಬೇಸರವಾಯಿತು. ನಂತರ ಪತ್ರಿಕಾಗೋಷ್ಠಿ ನಡೆಸಿ, ಮಾಧ್ಯಮಗಳಿಗೆ ಮಾಹಿತಿ ನೀಡಲಾಯಿತು. ಅಂಜಲಿ ಕುಟುಂಬಕ್ಕೆ ವೈಯುಕ್ತಿಕವಾಗಿ ೨ ಲಕ್ಷ ರೂಪಾಯಿಗಳ ಸಹಾಯ ಮಾಡಿದ್ದೇನೆ.

RELATED ARTICLES
- Advertisment -
Google search engine

Most Popular