ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ ೨ ನೇ ಸ್ಥಾನ, ಕೊಡಗಿಗೆ ೩ನೇ ಸ್ಥಾನ, ಉತ್ತರ ಕನ್ನಡ ೪ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ೯ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ ೧೦ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ ೧೧ನೇ ಸ್ಥಾನದಲ್ಲಿದೆ.
ಕಳೆದ ಬಾರಿಯಂತೆ ಈ ಬಾರಿ ಕೂಡ ಈ ಬಾರಿ ದಕ್ಷಿಣ ಕನ್ನಡ (೯೫.೩೪%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (೯೫.೨೪%) ಎರಡನೇ ಸ್ಥಾನ ಪಡೆದಿದೆ. ಕೊಡಗು (೯೦.೫೫%) ತೃತೀಯ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉತ್ತರ ಕನ್ನಡ ೯೦%, ವಿಜಯಪುರ ೮೫%, ಚಿಕ್ಕಮಗಳೂರು ೮೩% ಫಲಿತಾಂಶ ಪಡೆದಿದೆ.
ವಾಣಿಜ್ಯ ವಿಭಾಗದಲ್ಲಿ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಅವರು ೬೦೦ ಕ್ಕೆ ೬೦೦ ಅಂಕಗಳನ್ನು ಪಡೆದಿದ್ದಾರೆ. ಅವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ೬೦೦ಕ್ಕೆ ೫೯೮ ಅಂಕಗಳನ್ನು ಗಳಿಸುವ ಮೂಲಕ ಶಿವಮೊಗ್ಗದ ಪಿಯು ಕಾಲೇಜಿನ ಡಿ.ಎನ್., ಅನ್ವಿತಾ ಎರಡನೇ ಸ್ಥಾನದಲ್ಲಿದ್ದಾರೆ.
ವಾಣಿಜ್ಯ ವಿಭಾಗ-೬೦೦ಕ್ಕೆ ೫೯೬ ಅಂಕ ಪಡೆದ ಛಾಯಾ ರವಿಕುಮಾರ್? ಮೂರನೇ ಸ್ಥಾನದಲ್ಲಿದ್ದಾರೆ. ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ೬೦೦ಕ್ಕೆ ೫೯೩ ಅಂಕಗಳನ್ನು ತಬಸುಮ್ ಪಡೆದಿದ್ದಾರೆ. ತಬಸುಮ್ , ಬೆಂಗಳೂರಿನ ಜಯನಗರ ಓಒಏಖಗಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಕಲಾ ವಿಭಾಗ-೬೦೦ಕ್ಕೆ ೫೯೨ ಅಂಕ ಪಡೆದ ಜಿ.ಎಲ್.ಖುಷನಾಯ್ಕ್ ಎರಡನೇ ಸ್ಥಾನದಲ್ಲಿದ್ದಾರೆ. ಕಲಾ ವಿಭಾಗ-೬೦೦ಕ್ಕೆ ೫೯೨ ಅಂಕ ಪಡೆದಿರುವ ಡಡ್ಡಿ ಕರಿಬಸಮ್ಮ ಮೂರನೇ ಸ್ಥಾನದಲ್ಲಿದ್ದಾರೆ.