Sunday, June 8, 2025
Google search engine

Homeರಾಜ್ಯಶೋಭಾ ಕರಂದ್ಲಾಜೆ ಕಾರು ಅಪಘಾತ: ಚಾಲಕರಿಬ್ಬರ ವಿರುದ್ಧ ಎಫ್ಐಆರ್​ ದಾಖಲು

ಶೋಭಾ ಕರಂದ್ಲಾಜೆ ಕಾರು ಅಪಘಾತ: ಚಾಲಕರಿಬ್ಬರ ವಿರುದ್ಧ ಎಫ್ಐಆರ್​ ದಾಖಲು

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರ ರ‍್ಯಾಲಿ ವೇಳೆ ಓರ್ವ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮತ್ತು ಬಸ್​ ಚಾಲಕನ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಐಪಿಸಿ ಸೆಕ್ಷನ್ 279, 304(A), 283 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು, ಈ ಸಂಬಂಧ ಪೊಲೀಸರಿಂದ ಇಬ್ಬರೂ ಚಾಲಕರಿಗೆ ನೋಟಿಸ್ ನೀಡಲಾಗಿದೆ.

ಇತ್ತ ಮರಣೋತ್ತರ ಪರೀಕ್ಷೆ ವರದಿಗೆ ಪೊಲೀಸರು ಕಾಯುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಸಾವು ಹೇಗೆ ಸಂಭವಿಸಿತು ಎಂದು ತಿಳಿಯಲಿದೆ. ಸದ್ಯ ಘಟನೆ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನ ಪರಿಶೀಲಿಸಲಾಗುತ್ತಿದೆ.

ಹಾಗೆ ಘಟನಾ ಸ್ಥಳದಲ್ಲಿ ಇದ್ದವರ ಬಳಿ ಅಪಘಾತದ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.  ಘಟನೆ ನಡೆದ ವೇಳೆ ಕಾರಿನಲ್ಲಿ ಯಾರು ಯಾರು ಇದ್ದರು, ಕಾರಿನ ಮಾಲೀಕರು ಯಾರು ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮೃತ ವ್ಯಕ್ತಿಯನ್ನು ಪ್ರಕಾಶ್ (60) ಎಂದು ಗುರುತಿಸಲಾಗಿದೆ. ಮೃತ ಪ್ರಕಾಶ್ ಬೈಕ್​ ಚಲಾಯಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಕರಂದ್ಲಾಜೆ ಅವರ ಚಾಲಕ ಕಾರಿನ ಬಾಗಿಲು ತೆರೆದ ವೇಳೆ ಡಿಕ್ಕಿ ಹೊಡೆದಿದ್ದಾರೆ. ರಸ್ತೆಗೆ ಬಿದ್ದ ಅವರ ಮೇಲೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular