ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಣಿಶಾಸ್ತç ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಸ್ನೇಹಾ ಸುಮಾ ಹೆಗಡೆ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಪ್ರಾಣಿಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಜಯಕುಮಾರ್ ಬಿ. ಮಲಶೆಟ್ಟಿ ಅವರ ಮಾರ್ಗದರ್ಶನದಲ್ಲಿ “ಎಫೆಕ್ಟ್ ಆಫ್ ಎ- ಟರ್ಪಿನಾಲ್ ಆನ್ ರಿಪ್ರೋಡಕ್ಟಿವ್, ಡೆವಲಪ್ಮೆಂಟ್ ಆಂಡ್ ನ್ಯೂರೋಟಾಕ್ಸಿಸಿಟಿ ಇನ್ ವಿಸ್ಟಾರ್ ರ್ಯಾಟ್ಸಾ” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.