ಬೆಂಗಳೂರು: ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮುಂದುವರೆದು ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಹಾಗೂ ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ರಾಜ್ಯದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದ್ದು, ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.



