Sunday, May 25, 2025
Google search engine

Homeಅಪರಾಧಪ್ರದೀಪ್ ಈಶ್ವರ್ ನಿವಾಸಕ್ಕೆ ಕಲ್ಲು ತೂರಾಟ: ನಾಲ್ವರ ಬಂಧನ

ಪ್ರದೀಪ್ ಈಶ್ವರ್ ನಿವಾಸಕ್ಕೆ ಕಲ್ಲು ತೂರಾಟ: ನಾಲ್ವರ ಬಂಧನ

ಚಿಕ್ಕಬಳ್ಳಾಪುರ: ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸಕ್ಕೆ ರಾತ್ರಿ ತೂರಾಟ ನಡೆಸಿದ ಪ್ರಕರಣದಲ್ಲಿ ನಾಲ್ವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಬಂಧಿತರು. ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ಆರೋಪಿಗಳು ಹೇಳಿದ್ದಾರೆಂ ತಿಳಿದುಬಂದಿದೆ. ಜೂನ್ ೪ರ ರಾತ್ರಿ ೧೦ ಗಂಟೆ ಶಾಕರ ಸುಮಾರಿಗೆ ಕಲ್ಲು ಎಸೆಯಲಾಗಿತ್ತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular