Sunday, June 8, 2025
Google search engine

Homeರಾಜಕೀಯಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಬಿ.ಎಸ್ ಯಡಿಯೂರಪ್ಪ

ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಬಿ.ಎಸ್ ಯಡಿಯೂರಪ್ಪ

ಹುಬ್ಬಳ್ಳಿ: ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸೋಮವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸಚಿವರಾದ ಬಸವರಾಜ ಭೈರತಿ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಇತರರಿದ್ದರು.

RELATED ARTICLES
- Advertisment -
Google search engine

Most Popular