ಮೈಸೂರು: ಕುವೆಂಪು ನಗರ ಬಿಜಿಎಸ್ ಬಿ.ಇಡಿ ಕಾಲೇಜಿನ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊಫೆಸರ್ ಎಚ್.ಎಸ್ ಮಲ್ಲಿಕಾರ್ಜುನ ಶಾಸ್ತ್ರಿ, ದೇಶದ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವ ಶಿಕ್ಷಕ ಸಮೂಹ ನಾವಿನ್ಯತೆಯಿಂದ ಕೂಡಿರುವ ವೈವಿಧ್ಯಮಯ ಪ್ರತಿಭೆಗಳ ಆಗರವಾಗಬೇಕು. ಪ್ರತಿಭೆಯುಳ್ಳ ಶಿಕ್ಷಕನು ಭವಿಷತ್ತಿನ ಶಿಕ್ಷಣದ ದಿಕ್ಸೂಚಿಯಾಗಬಲ್ಲನು ಆದ್ದರಿಂದ ಪ್ರಶಿಕ್ಷಣಾರ್ಥಿಗಳು ಪಾಠ ಬೋಧನೆ ತರಬೇತಿ ಜೊತೆಗೆ ನಾಟಕ, ಸಂಗೀತ, ಹಾಡುಗಾರಿಕೆ, ನೃತ್ಯ ಹಾಗೂ ವಿವಿಧ ಪ್ರದರ್ಶಕ ಕಲೆಗಳ ಹೂರಣವಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ನಾಗರಾಜು ಅಧ್ಯಕ್ಷತೆಯನ್ನು ವಹಿಸಿದ್ದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರದರ್ಶಿಸಿದರು ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮವನ್ನು ಸಾಕ್ಷಿಕರಿಸಿದರು.