Tuesday, June 10, 2025
Google search engine

Homeರಾಜಕೀಯಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಮಾಜಿ ಸಚಿವ ಡಿ ಸಿ ತಮ್ಮಣ್ಣ ಹಾಗೂ ಬಿಜೆಪಿ ಮುಖಂಡರಿಂದ...

ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಮಾಜಿ ಸಚಿವ ಡಿ ಸಿ ತಮ್ಮಣ್ಣ ಹಾಗೂ ಬಿಜೆಪಿ ಮುಖಂಡರಿಂದ ಮತಯಾಚನೆ

ಮದ್ದೂರು: ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹೂತಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಜಿ ಸಚಿವ ಡಿ ಸಿ ತಮ್ಮಣ್ಣ, ಬಿಜೆಪಿ ಮುಖಂಡ ಎಸ್ಪಿ ಸ್ವಾಮಿ, ಹಾಗೂ ಗುರು ಚರಣ್ ಜಂಟಿಯಾಗಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಮತಯಾಚನೆ ಮಾಡಿದರು.

ಕಳೆದ ಬಾರಿ ಮಾಡಿದ ತಪ್ಪನ್ನು ಈ ಬಾರಿ ಮಾಡದೆ ಣ್ಣಿನ ಮಕ್ಕಳದ ಹೆಚ್‍ಡಿ ಕುಮಾರಸ್ವಾಮಿರವರ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಕೈಜೋಡಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಎಸ್ ಪಿ ಸ್ವಾಮಿ ಕೇಂದ್ರದಲ್ಲಿ ನರೇಂದ್ರ ಮೋದಿ ರವರ ಉತ್ತಮ ಆಡಳಿತ ಹಾಗೂ ದೇಶವನ್ನು ಹಿಂದುತ್ವವನ್ನು ಕಾಪಾಡಿಕೊಳ್ಳಲು ನರೇಂದ್ರ ಮೋದಿ ರವರಿಗೆ ಆಶೀರ್ವದಿಸಿ.  ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾದ ಕುಮಾರಸ್ವಾಮಿಯವರನ್ನ ಆಶೀರ್ವದಿಸಿದರೆ ಕೇಂದ್ರ ಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಕಾರ್ಯಧ್ಯಕ್ಷ ರಾಜಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ್, ಮುಖಂಡರಾದ ದಿವ್ಯ, ಕೆ ಟಿ ರಾಜಣ್ಣ, ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular