Friday, June 20, 2025
Google search engine

Homeರಾಜ್ಯಅಭಿವೃದ್ದಿ ಹೊಂದಿರುವ ದೇಶಗಳಿಗೆ ಹೋಲಿಸಿದರೆ ನಾವು ಕಡಿಮೆ ಸಾಲದಲ್ಲಿದ್ದೇವೆ: ನಿರ್ಮಲಾ ಸೀತಾರಾಮನ್

ಅಭಿವೃದ್ದಿ ಹೊಂದಿರುವ ದೇಶಗಳಿಗೆ ಹೋಲಿಸಿದರೆ ನಾವು ಕಡಿಮೆ ಸಾಲದಲ್ಲಿದ್ದೇವೆ: ನಿರ್ಮಲಾ ಸೀತಾರಾಮನ್

ಬೆಂಗಳೂರು : ನನ್ನ ತೆರಿಗೆ ನನ್ನ ಹಕ್ಕು ಘೋಷಣೆ ಸರಿ ಇದೆ. ಎಲ್ಲ ಬೆಂಗಳೂರಿಗರು ಇದೇ ಪ್ರಶ್ನೆ ಕೇಳುತ್ತಾರೆಯೇ ಚುನಾವಣೆಗೆ ಮುನ್ನ ಗ್ಯಾರಂಟಿ ಘೋಷಿಸುವ ಮುನ್ನ ಈ ಮಾತು ನೆನಪಿರಲಿಲ್ಲವೇ ಕೊಟ್ಟಿರುವ ಆಶ್ವಾಸನೆ ಪೂರ್ಣ ಗೊಳಿಸಲು ಹಣ ಎಲ್ಲಿಂದ ತರುತ್ತಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರು ಗ್ಯಾರಂಟಿಗಳಿಗೆ ಹಣ ಬಳಕೆಯಾಗುತ್ತಿರುವುದರಿಂದ ಅಭಿವೃದ್ದಿ ಕೆಲಸಗಳಿಗೆ ಹಣ ಕೊರತೆಯಿದೆ ಎಂದು ಹೇಳಿದ್ದರು. ಕರ್ನಾಟಕದ ಕಲ್ಯಾಣಕ್ಕೆ ಏನು ಮಾಡುತ್ತೀರಿ ಎಂದರು.

೨೦೧೪ಕ್ಕೂ ಮುಂಚೆ ಭಾರತಕ್ಕೆ ಎಷ್ಟು ಸಾಲವಿತ್ತು, ಈಗ ಎಷ್ಟಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿತ್ತ ಸಚಿವೆ, ಈ ಬಗ್ಗೆ ನನ್ನಲ್ಲಿ ಸರಿಯಾದ ಅಂಕಿ ಅಂಶಗಳಿಲ್ಲ. ಆದರೂ ಹೇಳುತ್ತೇನೆ, ನಮಗೆ ಕೋವಿಡ್ ಸಮಯದಲ್ಲಿ ಬಹಳಷ್ಟು ಹಣ ಬೇಕಾಗಿತ್ತು. ಅದಕ್ಕಾಗಿ ಸಾಲ ಪಡೆದಿದ್ದೇವೆ. ಅದನ್ನು ಪಾವತಿಯೂ ಮಾಡುತ್ತಿದ್ದೇವೆ. ಅಭಿವೃದ್ದಿ ಹೊಂದಿರುವ ದೇಶಗಳಿಗೆ ಹೋಲಿಸಿದರೆ ನಾವು ಕಡಿಮೆ ಸಾಲದಲ್ಲಿದ್ದೇವೆ” ಎಂದರು.
ಕಾಂಗ್ರೆಸ್ ನೇತೃತ್ವದ ಕೇಂದ್ರದಲ್ಲಿ ಬಂದರೆ ಸಾಂವಿಧಾನಿಕ ಸ್ವತಂತ್ರ ಸಂಸ್ಥೆಗಳ ದುರ್ಬಳಕೆ ತಡೆಯುತ್ತೇವೆ ಎನ್ನುತ್ತಿದ್ದಾರೆ. ವಿಶೇಷವೆಂದರೆ ಅವರೆಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ. ಮೊದಲು ಅವರು ಆರೋಪ ರಹಿತವಾಗಿ ಹೊರಬರಲಿ. ಆ ಮೇಲೆ ಸಾಂವಿಧಾನಿಕ ಸ್ವತಂತ್ರ ಸಂಸ್ಥೆಗ ಬಗ್ಗೆ ಮಾತನಾಡಲಿ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular